<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.</p>.<p>ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.</p>.<p>ಹಾಲಪ್ಪ ಮತ್ತು ಗಂಗಮ್ಮ ಅವರ ಮೃತದೇಹ ಶುಕ್ರವಾರ ಸಂಜೆ ಗಾದಿಗನೂರಿಗೆ ತಲುಪಿತ್ತು. ರಾತ್ರಿಯೇ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಈ ಶೋಕದಲ್ಲಿ ಊರ ಮಂದಿ ಇದ್ದಾಗಲೇ ಹಾಲಪ್ಪ ಅವರ ಪತ್ನಿ ಕವಿತಾ ಮತ್ತು ಮೈಲಾರಪ್ಪ ಅವರ ನಿಧನದ ಸುದ್ದಿ ಊರಿಗೆ ಬಂದು ಅಪ್ಪಳಿಸಿದೆ. ಈ ಇಬ್ಬರ ಮೃತದೇಹಗಳು ಶನಿವಾರ ಸಂಜೆ ವೇಳೆಗೆ ಇಲ್ಲಿಗೆ ತಲುಪುವ ನಿರೀಕ್ಷೆ ಇದೆ.</p>.<p>ಸೆ.27ರ ಬೆಳಿಗ್ಗೆ 5.15ರ ವೇಳೆಗೆ ಕವಿತಾ ಅವರು ಸ್ಟವ್ ಹಚ್ಚುವಾಗ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಮೊದಲಿಗೆ ತೋರಣಗಲ್ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.ಹೊಸಪೇಟೆ| ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.</p>.<p>ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.</p>.<p>ಹಾಲಪ್ಪ ಮತ್ತು ಗಂಗಮ್ಮ ಅವರ ಮೃತದೇಹ ಶುಕ್ರವಾರ ಸಂಜೆ ಗಾದಿಗನೂರಿಗೆ ತಲುಪಿತ್ತು. ರಾತ್ರಿಯೇ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಈ ಶೋಕದಲ್ಲಿ ಊರ ಮಂದಿ ಇದ್ದಾಗಲೇ ಹಾಲಪ್ಪ ಅವರ ಪತ್ನಿ ಕವಿತಾ ಮತ್ತು ಮೈಲಾರಪ್ಪ ಅವರ ನಿಧನದ ಸುದ್ದಿ ಊರಿಗೆ ಬಂದು ಅಪ್ಪಳಿಸಿದೆ. ಈ ಇಬ್ಬರ ಮೃತದೇಹಗಳು ಶನಿವಾರ ಸಂಜೆ ವೇಳೆಗೆ ಇಲ್ಲಿಗೆ ತಲುಪುವ ನಿರೀಕ್ಷೆ ಇದೆ.</p>.<p>ಸೆ.27ರ ಬೆಳಿಗ್ಗೆ 5.15ರ ವೇಳೆಗೆ ಕವಿತಾ ಅವರು ಸ್ಟವ್ ಹಚ್ಚುವಾಗ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಮೊದಲಿಗೆ ತೋರಣಗಲ್ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.ಹೊಸಪೇಟೆ| ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>