ಕೊಟ್ಟ ಮಾತಿನಂತೆ ಗೀತಾ ಅವರು ಗುರುವಾರ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಲೆ ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಿದರು. ಶೀಘ್ರದಲ್ಲೇ ಟ್ರಸ್ಟ್ ರಚಿಸಿ, ಪದಾಧಿಕಾರಿಗಳನ್ನು ನೇಮಕ ಮಾಡಿ, ಶಾಲೆಯ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ ಎಂದು ಸಿನಿಮಾ ಪತ್ರಕರ್ತ ಸತೀಶ್ ಬಿಲ್ಲಾಡಿ ತಿಳಿಸಿದರು. ಗೀತಾ ಅವರು ಮಾಧ್ಯಮದವರೊಂದಿಗೆ ಮಾತಾಡಲು ನಿರಾಕರಿಸಿದರು.