<p><strong>ಹೊಸಪೇಟೆ (ವಿಜಯನಗರ</strong>): ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>‘ಸರ್ಕಾರದ ಎರಡು ವರ್ಷದ ಸಾಧನೆಗಳ ಸಮಾವೇಶವನ್ನು ಹೊಸಪೇಟೆ ನಗರದಲ್ಲಿ ಆಯೋಜಿಸಿ ಯಶಸ್ವಿಗೊಳಿಸಿರುವುದು ತೃಪ್ತಿ ನೀಡಿದೆ. ರಾಜ್ಯ ಸರ್ಕಾರವು ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ’ ಎಂದು ಅವರು ತಿಳಿಸಿದರು.</p>.<p>‘ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಶಕ್ತಿ ಯೋಜನೆ ಜಾರಿಯಿಂದಾಗಿ ವಿಜಯನಗರ ಜಿಲ್ಲೆಯ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಆದಾಯ ಬರುತ್ತಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ.ಬಿ ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ ಎಂದರು.</p>.<p>‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ವಾರ್ತಾ ಇಲಾಖೆಯ ಕೆ.ರಾಮಾಂಜನೇಯ, ಕೆಕೆಆರ್ಟಿಸಿಯ ರಾಜಶೇಖರ್ ವಾಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ</strong>): ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>‘ಸರ್ಕಾರದ ಎರಡು ವರ್ಷದ ಸಾಧನೆಗಳ ಸಮಾವೇಶವನ್ನು ಹೊಸಪೇಟೆ ನಗರದಲ್ಲಿ ಆಯೋಜಿಸಿ ಯಶಸ್ವಿಗೊಳಿಸಿರುವುದು ತೃಪ್ತಿ ನೀಡಿದೆ. ರಾಜ್ಯ ಸರ್ಕಾರವು ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ’ ಎಂದು ಅವರು ತಿಳಿಸಿದರು.</p>.<p>‘ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಶಕ್ತಿ ಯೋಜನೆ ಜಾರಿಯಿಂದಾಗಿ ವಿಜಯನಗರ ಜಿಲ್ಲೆಯ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಆದಾಯ ಬರುತ್ತಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ.ಬಿ ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ ಎಂದರು.</p>.<p>‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ವಾರ್ತಾ ಇಲಾಖೆಯ ಕೆ.ರಾಮಾಂಜನೇಯ, ಕೆಕೆಆರ್ಟಿಸಿಯ ರಾಜಶೇಖರ್ ವಾಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>