ಅನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು. ಕೋವಿಡ್ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ನೌಕರರ, ಪಿಂಚಣಿದಾರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಿಡುಗಡೆಗೊಳಿಸಬೇಕು. 2022ರ ಜುಲೈನಿಂದ ಜಾರಿಗೆ ಬರುವಂತೆ ಶೇ.25 ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು. ನಿಶ್ಚಿತ ಪಿಂಚಣಿ ಪದ್ದತಿ ಮರು ಸ್ಥಾಪಿಸಬೇಕು. ಖಾಲಿಯಿರುವ 2.80ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗಿರುವಂತೆ ರಾಜ್ಯದಲ್ಲಿಯೂ ಅಂಗವಿಕಲ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.