ಹೊಸಪೇಟೆ (ವಿಜಯನಗರ): ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ತಾಲ್ಲೂಕಿನ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಟಿ. ಜಂಬಣ್ಣ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ರಾಮಪ್ಪ ಆದೇಶ ಹೊರಡಿಸಿದ್ದಾರೆ.
ಜಂಬಣ್ಣ ಅವರು ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗೆ ಕೆಲವು ವಿದ್ಯಾರ್ಥಿನಿಯರು ಲಿಖಿತ ರೂಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಅವರಿಗೆ ದೂರು ಕೊಟ್ಟಿದ್ದರು. ಈ ದೂರಿನ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮೂವರು ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿದ್ದರು.