<p><strong>ಹೊಸಪೇಟೆ(ವಿಜಯನಗರ): </strong>‘ರಾಜ್ಯ ಸರ್ಕಾರ ಪ್ರಕಟಿಸಿರುವ ₹1,250 ಕೋಟಿ ವಿಶೇಷ ಪ್ಯಾಕೇಜ್ ರಾಜ್ಯದ ಬಡವರೆಲ್ಲರಿಗೂ ತಲುಪದ ಅರೆಬರೆ ಪ್ಯಾಕೇಜ್ ಆಗಿದೆ. ಕೋವಿಡ್ ಸಂಕಷ್ಟದ ವೇಳೆ ಜನತೆಯ ಜೀವನ ರಕ್ಷಿಸುವ ಬದ್ಧತೆಯಿಲ್ಲದಿರುವುದು ಇದರಿಂದ ಸಾಬೀತಾಗಿದೆ. ಇದು ಸರ್ಕಾರದ ವೈಫಲ್ಯ ತೋರಿಸುತ್ತದೆ’ ಎಂದು ಡಿವೈಎಫ್ಐ ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ ಆರೋಪಿಸಿದ್ದಾರೆ.</p>.<p>‘ಸರ್ಕಾರ ಘೋಷಿಸಿರುವ ಪ್ಯಾಕೇಜ್ನಲ್ಲಿ ಬಡವರು, ರೈತರು ಹಾಗೂ ಕೂಲಿಕಾರ ವರ್ಗಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಪ್ಯಾಕೇಜ್ ಜನರ ರಕ್ಷಣೆಯ ನೈಜ ಕಾಳಜಿ ಒಳಗೊಂಡಿಲ್ಲ. ಈಗಾಗಲೇ ಉದ್ಯೋಗ ಕಳೆದುಕೊಂಡು ಜೀವನ ಕಟ್ಟಿಕೊಳ್ಳಲು ಪರದಾಡುತ್ತಿರುವ ಯುವಜನರಿಗಂತೂ ಈ ಪ್ಯಾಕೇಜ್ ನಿಂದ ನಯಾಪೈಸೆ ಲಾಭವಿಲ್ಲ’ ಎಂದು ಗುರುವಾರ ಪ್ರಕಟಣೆಯಲ್ಲಿ ದೂರಿದ್ದಾರೆ.</p>.<p>‘ಎಲ್ಲ ಬಡ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಕೆಲಸವನ್ನು ₹600 ಕೂಲಿಯೊಂದಿಗೆ 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕಿತ್ತು. ಆದರೆ, ಆ ಕೆಲಸ ಆಗಿಲ್ಲ. ಎರಡನೇ ಅಲೆಯಲ್ಲಿ ಸಾವು, ನೋವು ಹೆಚ್ಚಾಗಿವೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪ್ಯಾಕೇಜ್ ಘೋಷಿಸಬೇಕಿತ್ತು’ ಎಂದು ಹೇಳಿದ್ದಾರೆ.</p>.<p>‘ಜನತೆ ಎದುರಿಸುತ್ತಿರುವ ಈ ಅಪಾಯಕರ ಸನ್ನಿವೇಶದಲ್ಲಿ ಜನರನ್ನು ರಕ್ಷಿಸಬೇಕಾದ ನೈಜ ಕಾಳಜಿ ಹಾಗೂ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ, ಎಲ್ಲರಿಗೂ ಆರೋಗ್ಯ ಖಾತ್ರಿ ಪಡಿಸಿ, ಆಹಾರ ಭದ್ರತೆಗೆ ಒತ್ತು ನೀಡಬೇಕಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ): </strong>‘ರಾಜ್ಯ ಸರ್ಕಾರ ಪ್ರಕಟಿಸಿರುವ ₹1,250 ಕೋಟಿ ವಿಶೇಷ ಪ್ಯಾಕೇಜ್ ರಾಜ್ಯದ ಬಡವರೆಲ್ಲರಿಗೂ ತಲುಪದ ಅರೆಬರೆ ಪ್ಯಾಕೇಜ್ ಆಗಿದೆ. ಕೋವಿಡ್ ಸಂಕಷ್ಟದ ವೇಳೆ ಜನತೆಯ ಜೀವನ ರಕ್ಷಿಸುವ ಬದ್ಧತೆಯಿಲ್ಲದಿರುವುದು ಇದರಿಂದ ಸಾಬೀತಾಗಿದೆ. ಇದು ಸರ್ಕಾರದ ವೈಫಲ್ಯ ತೋರಿಸುತ್ತದೆ’ ಎಂದು ಡಿವೈಎಫ್ಐ ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ ಆರೋಪಿಸಿದ್ದಾರೆ.</p>.<p>‘ಸರ್ಕಾರ ಘೋಷಿಸಿರುವ ಪ್ಯಾಕೇಜ್ನಲ್ಲಿ ಬಡವರು, ರೈತರು ಹಾಗೂ ಕೂಲಿಕಾರ ವರ್ಗಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಪ್ಯಾಕೇಜ್ ಜನರ ರಕ್ಷಣೆಯ ನೈಜ ಕಾಳಜಿ ಒಳಗೊಂಡಿಲ್ಲ. ಈಗಾಗಲೇ ಉದ್ಯೋಗ ಕಳೆದುಕೊಂಡು ಜೀವನ ಕಟ್ಟಿಕೊಳ್ಳಲು ಪರದಾಡುತ್ತಿರುವ ಯುವಜನರಿಗಂತೂ ಈ ಪ್ಯಾಕೇಜ್ ನಿಂದ ನಯಾಪೈಸೆ ಲಾಭವಿಲ್ಲ’ ಎಂದು ಗುರುವಾರ ಪ್ರಕಟಣೆಯಲ್ಲಿ ದೂರಿದ್ದಾರೆ.</p>.<p>‘ಎಲ್ಲ ಬಡ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಕೆಲಸವನ್ನು ₹600 ಕೂಲಿಯೊಂದಿಗೆ 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕಿತ್ತು. ಆದರೆ, ಆ ಕೆಲಸ ಆಗಿಲ್ಲ. ಎರಡನೇ ಅಲೆಯಲ್ಲಿ ಸಾವು, ನೋವು ಹೆಚ್ಚಾಗಿವೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪ್ಯಾಕೇಜ್ ಘೋಷಿಸಬೇಕಿತ್ತು’ ಎಂದು ಹೇಳಿದ್ದಾರೆ.</p>.<p>‘ಜನತೆ ಎದುರಿಸುತ್ತಿರುವ ಈ ಅಪಾಯಕರ ಸನ್ನಿವೇಶದಲ್ಲಿ ಜನರನ್ನು ರಕ್ಷಿಸಬೇಕಾದ ನೈಜ ಕಾಳಜಿ ಹಾಗೂ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ, ಎಲ್ಲರಿಗೂ ಆರೋಗ್ಯ ಖಾತ್ರಿ ಪಡಿಸಿ, ಆಹಾರ ಭದ್ರತೆಗೆ ಒತ್ತು ನೀಡಬೇಕಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>