ಅಪಹರಣಕಾರರು ಮೋರಿಗೇರಿ ಕ್ರಾಸ್ ನ ಉಲವತ್ತಿ ಗ್ರಾಮದ ಮಣ್ಣಿನ ರಸ್ತೆಯಲ್ಲಿ ಬಾಲಕನ ಸಮೇತ ಅಡಗಿ ಕುಳಿತ್ತಿದ್ದರು. ಬಾಲಕನ ತಂದೆ ರಾಘವೇಂದ್ರ ಅವರು ಪತ್ನಿಯೊಂದಿಗೆ ಹಣದ ಸಮೇತ ತೆರಳಿದ್ದರು. ಅವರೊಂದಿಗೆ ಪೊಲೀಸರು ಗ್ರಾಮೀಣರಂತೆ ವೇಷ ಮರೆಸಿಕೊಂಡು ಹಿಂಬಾಲಿಸಿ, ಸುತ್ತುವರೆದಿದ್ದರು. ಇಬ್ಬರು ಪೊಲೀಸರು, ಕುಡುಕರಂತೆ ನಟಿಸುತ್ತ ಅಪಹರಣಕಾರರ ಬಳಿ ತೆರಳುತ್ತಿದ್ದಂತೆ ಬಾಲಕ ಮತ್ತು ಬೈಕ್ ಬಿಟ್ಟು ಪರಾರಿಯಾದರು. ಅಪಹರಣಕಾರರು ದೂರವಾಣಿ ಕರೆ ಮಾಡಿದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಅಪಹರಣಕಾರರನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು. ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದರು.