<p>ಹಗರಿಬೊಮ್ಮನಹಳ್ಳಿ: ಮಾಲವಿ ಜಲಾಶಯಕ್ಕೆ ಬಾಕಿ ಉಳಿದಿರುವ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ತಹಶೀಲ್ದಾರ್ಗೆ ಈಚೆಗೆ ಮನವಿ ಸಲ್ಲಿಸಿದರು.</p>.<p>ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಮಾತನಾಡಿ, ‘ಎರಡು ತಿಂಗಳಿಂದ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮುಂಗಾರು ಮಳೆ ಆರಂಭವಾಗುವ ಮುನ್ನ ದುರಸ್ತಿಗೊಳಿಸದಿದ್ದರೆ ಮತ್ತೆ ಈ ವರ್ಷವೂ ನೀರು ಪೋಲಾಗಿ ಹರಿಯುವ ಆತಂಕವಿದೆ’ ಎಂದು ಹೇಳಿದರು.</p>.<p>‘ಏಪ್ರಿಲ್ 26ರೊಳಗೆ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಬೇಕು. ಇಲ್ಲದಿದ್ದ ರೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ಈ.ಕೃಷ್ಣಮೂರ್ತಿ, ಹುರುಕಡ್ಲಿ ಶಿವಕುಮಾರ್, ರೈತ ಸಂಘದ ಯುವ ಘಟಕದ ಅಧ್ಯಕ್ಷ ತಂಬ್ರಹಳ್ಳಿ ರವಿಕುಮಾರ್, ಎ.ಕುಮಾರಸ್ವಾಮಿ ಇದ್ದರು. ಇದಕ್ಕೂ ಮುನ್ನ ಜಲಾಶಯಕ್ಕೆ ಭೇಟಿ ನೀಡಿ ನನೆಗುದಿಗೆ ಬಿದ್ದಿರುವ ಕಾಮಗಾರಿ ವೀಕ್ಷಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-25-873727819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಗರಿಬೊಮ್ಮನಹಳ್ಳಿ: ಮಾಲವಿ ಜಲಾಶಯಕ್ಕೆ ಬಾಕಿ ಉಳಿದಿರುವ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ತಹಶೀಲ್ದಾರ್ಗೆ ಈಚೆಗೆ ಮನವಿ ಸಲ್ಲಿಸಿದರು.</p>.<p>ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಮಾತನಾಡಿ, ‘ಎರಡು ತಿಂಗಳಿಂದ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮುಂಗಾರು ಮಳೆ ಆರಂಭವಾಗುವ ಮುನ್ನ ದುರಸ್ತಿಗೊಳಿಸದಿದ್ದರೆ ಮತ್ತೆ ಈ ವರ್ಷವೂ ನೀರು ಪೋಲಾಗಿ ಹರಿಯುವ ಆತಂಕವಿದೆ’ ಎಂದು ಹೇಳಿದರು.</p>.<p>‘ಏಪ್ರಿಲ್ 26ರೊಳಗೆ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಬೇಕು. ಇಲ್ಲದಿದ್ದ ರೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ಈ.ಕೃಷ್ಣಮೂರ್ತಿ, ಹುರುಕಡ್ಲಿ ಶಿವಕುಮಾರ್, ರೈತ ಸಂಘದ ಯುವ ಘಟಕದ ಅಧ್ಯಕ್ಷ ತಂಬ್ರಹಳ್ಳಿ ರವಿಕುಮಾರ್, ಎ.ಕುಮಾರಸ್ವಾಮಿ ಇದ್ದರು. ಇದಕ್ಕೂ ಮುನ್ನ ಜಲಾಶಯಕ್ಕೆ ಭೇಟಿ ನೀಡಿ ನನೆಗುದಿಗೆ ಬಿದ್ದಿರುವ ಕಾಮಗಾರಿ ವೀಕ್ಷಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-25-873727819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>