ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ: ಬಸ್ ಸಂಚಾರಕ್ಕೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳ ಪ್ರತಿಭಟನೆ

Last Updated 9 ನವೆಂಬರ್ 2021, 4:53 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಬಸ್ ಸಂಚಾರಕ್ಕೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಇಲ್ಲಿನ ಬಸ್ ಡಿಪೊ ಎದುರು ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಮುತ್ಕೂರು, ಬನ್ನಿಗೋಳ, ಶೀಗೇನಹಳ್ಳಿ, ಮಾದೂರು, ಸೊಬಟಿ, ಅಂಕಸಮುದ್ರ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಬೇಕು. ಬಸ್ಸುಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಎಸ್‌ಎಫ್‌ಐ ತಾಲ್ಲೂಕು ಘಟಕದ ಸಂಚಾಲಕ ಅಬ್ದುಲ್ ಸುಬಾನ್ ಮಾತನಾಡಿ, ತಾಲ್ಲೂಕಿನ‌ ಹಲವು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ. ನೂರಾರು ವಿದ್ಯಾರ್ಥಿಗಳು ನಿತ್ಯ ತರಗತಿಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿ ಮುಖಂಡರಾದ ಟಿ.ಎಂ.ಸುದೀಪ್.ಕೆ.ಸುರೇಶ್,ಕೆ. ಶಿವಾನಂದ, ತಳವಾರ ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT