ತುಂಗಭದ್ರಾ ಹಿನ್ನೀರು ಪ್ರದೇಶದ ಪಕ್ಕದ ಬಂಡೆಯಲ್ಲಿ ಒಡಮೂಡಿರುವ ತಾಲ್ಲೂಕಿನ ತಂಬ್ರಹಳ್ಳಿಯ ಬಂಡೆ ರಂಗನಾಥ ಸ್ವಾಮಿ, ಈ ದೇವಸ್ಥಾನದ ನಿರ್ಮಾಣಕ್ಕೆ ತನ್ನದೇ ಆದ ಇತಿಹಾಸವಿದೆ. ಬೆಟ್ಟದ ಕೆಳಗೆ ನಿರ್ಮಾಣಗೊಂಡಿರುವ ಬಾವಿಗೂ ಕೂಡ ಓಬಳನಾಯಕ ಬಾವಿ ಎಂದು ಹೇಳಲಾಗುತ್ತಿದೆ. ಈ ತಂಗಾಳಿ ಗೋಪುರದ ನಾಲ್ಕುದಿಕ್ಕಿಗೂ ಬಾಲಕೃಷ್ಣ, ಉಗ್ರನರಸಿಂಹ, ವರಾಹಸ್ವಾಮಿ ಮೂರ್ತಿಗಳನ್ನು ಕೆತ್ತಲ್ಪಟ್ಟಿವೆ. ಗೋಪುರದ ಕೆಳಗಿನ ಕಟ್ಟೆಯಲ್ಲಿ ಕಲ್ಲಿನಲ್ಲಿ ಕೆತ್ತಿರುವ ಬಟ್ಟಲುಗುಣಿ ಆಕರ್ಷಣೀಯವಾಗಿದೆ.