<p><strong>ಹೊಸಪೇಟೆ (ವಿಜಯನಗರ):</strong> ಈ ಬಾರಿಯ ಹಂಪಿ ಉತ್ಸವ ಫೆಬ್ರುವರಿ 13ರಿಂದ 15ರವರೆಗೆ ನಡೆಯಲಿದೆ ಎಂದು ಬುಧವಾರ ಇಲ್ಲಿ ಪ್ರಕಟಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಲಾಂಛನ ಬಿಡುಗಡೆ ಮಾಡಿದರು.</p><p>13ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟಿಸಲಿದ್ದಾರೆ. ಉತ್ಸವಕ್ಕೆ ₹22 ಕೋಟಿ ಅನುದಾನ ಕೇಳಿದ್ದೇವೆ. ಮುಂದೆ ನವೆಂಬರ್ ತಿಂಗಳಲ್ಲೇ ಉತ್ಸವ ನಡೆಸುವ ಬಗ್ಗೆ ಪ್ರಯತ್ನ ನಡೆಯಲಿದೆ ಎಂದು ಸಚಿವರು ಬಳಿಕ ತಿಳಿಸಿದರು.</p>.<p>ಕೊಟ್ಟೂರು ರಥೋತ್ಸವ ಫೆ.12ರಂದು ಇದ್ದರೂ, ಹಂಪಿ ಉತ್ಸವದ ಭದ್ರತೆಗೆ ಯಾವ ತೊಂದರೆಯೂ ಆಗದ ಹಾಗೆ ಬದಲಿ ವ್ಯವಸ್ಥೆ ಮಾಡಲಾಗುವುದು, ಉತ್ಸವವನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದರು.</p><p>ಸಂಸದ ಇ.ತುಕಾರಾಂ, ಶಾಸಕರಾಧ ಲತಾ ಮಲ್ಲಿಕಾರ್ಜುನ, ಜೆ.ಎನ್.ಗಣೇಶ್, ಭರತ್ ರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಂ ನಿಯಾಜಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಈ ಬಾರಿಯ ಹಂಪಿ ಉತ್ಸವ ಫೆಬ್ರುವರಿ 13ರಿಂದ 15ರವರೆಗೆ ನಡೆಯಲಿದೆ ಎಂದು ಬುಧವಾರ ಇಲ್ಲಿ ಪ್ರಕಟಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಲಾಂಛನ ಬಿಡುಗಡೆ ಮಾಡಿದರು.</p><p>13ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟಿಸಲಿದ್ದಾರೆ. ಉತ್ಸವಕ್ಕೆ ₹22 ಕೋಟಿ ಅನುದಾನ ಕೇಳಿದ್ದೇವೆ. ಮುಂದೆ ನವೆಂಬರ್ ತಿಂಗಳಲ್ಲೇ ಉತ್ಸವ ನಡೆಸುವ ಬಗ್ಗೆ ಪ್ರಯತ್ನ ನಡೆಯಲಿದೆ ಎಂದು ಸಚಿವರು ಬಳಿಕ ತಿಳಿಸಿದರು.</p>.<p>ಕೊಟ್ಟೂರು ರಥೋತ್ಸವ ಫೆ.12ರಂದು ಇದ್ದರೂ, ಹಂಪಿ ಉತ್ಸವದ ಭದ್ರತೆಗೆ ಯಾವ ತೊಂದರೆಯೂ ಆಗದ ಹಾಗೆ ಬದಲಿ ವ್ಯವಸ್ಥೆ ಮಾಡಲಾಗುವುದು, ಉತ್ಸವವನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದರು.</p><p>ಸಂಸದ ಇ.ತುಕಾರಾಂ, ಶಾಸಕರಾಧ ಲತಾ ಮಲ್ಲಿಕಾರ್ಜುನ, ಜೆ.ಎನ್.ಗಣೇಶ್, ಭರತ್ ರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಂ ನಿಯಾಜಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>