<p><strong>ಹೊಸಪೇಟೆ(ವಿಜಯನಗರ):</strong> ಹಂಪಿ ಸೇರಿದಂತೆ ಇತರೆ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ ಗೌರವಧನ ನೀಡಬೇಕೆಂದು ಆಗ್ರಹಿಸಿ ಗೈಡ್ಗಳು ಬುಧವಾರ ಹಂಪಿಯಲ್ಲಿ ಪತ್ರ ಚಳವಳಿ ನಡೆಸಿದರು.</p>.<p>ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಪತ್ರಗಳನ್ನು ಪೋಸ್ಟ್ ಮಾಡಿದರು. ‘ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಗದರ್ಶಿಗಳಿಗೆ ತರಬೇತಿ ಕೊಡಬೇಕು. ನೋಂದಾಯಿತ ಮಾರ್ಗದರ್ಶಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ವಿದ್ಯಾರಣ್ಯ ಪ್ರವಾಸಿ ಮಾರ್ಗದರ್ಶಿಗಳ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>‘ಎಲ್ಲ ಮಾರ್ಗದರ್ಶಿಗಳು ಪ್ರವಾಸಿಗರು ಕೊಡುವ ಹಣದಲ್ಲೆ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಸರ್ಕಾರದಿಂದ ಆರ್ಥಿಕ ನೆರವು ಇಲ್ಲದೆ ಸಂಕಷ್ಟ ಎದುರಾಗಿದೆ. ವರ್ಷದಲ್ಲಿ ಹಲವು ತಿಂಗಳು ಪ್ರವಾಸಿಗರು ಭೇಟಿ ಕೊಡುವುದಿಲ್ಲ. ಈ ವೇಳೆ ಕಷ್ಟ ಎದುರಾಗುತ್ತದೆ. ಸರ್ಕಾರ ಮಾಸಿಕ ಗೌರವ ಧನ ನಿಗದಿ ಮಾಡಿದರೆ ಅನುಕೂಲವಾಗುತ್ತದೆ. ಸಾಂಸ್ಕೃತಿಕ ರಾಯಭಾರಿಗಳಾಗಿ ಮಾರ್ಗದರ್ಶಿಗಳು ಕೆಲಸ ಮಾಡುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಹಂಪಿ ಸೇರಿದಂತೆ ಇತರೆ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ ಗೌರವಧನ ನೀಡಬೇಕೆಂದು ಆಗ್ರಹಿಸಿ ಗೈಡ್ಗಳು ಬುಧವಾರ ಹಂಪಿಯಲ್ಲಿ ಪತ್ರ ಚಳವಳಿ ನಡೆಸಿದರು.</p>.<p>ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಪತ್ರಗಳನ್ನು ಪೋಸ್ಟ್ ಮಾಡಿದರು. ‘ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಗದರ್ಶಿಗಳಿಗೆ ತರಬೇತಿ ಕೊಡಬೇಕು. ನೋಂದಾಯಿತ ಮಾರ್ಗದರ್ಶಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ವಿದ್ಯಾರಣ್ಯ ಪ್ರವಾಸಿ ಮಾರ್ಗದರ್ಶಿಗಳ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>‘ಎಲ್ಲ ಮಾರ್ಗದರ್ಶಿಗಳು ಪ್ರವಾಸಿಗರು ಕೊಡುವ ಹಣದಲ್ಲೆ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಸರ್ಕಾರದಿಂದ ಆರ್ಥಿಕ ನೆರವು ಇಲ್ಲದೆ ಸಂಕಷ್ಟ ಎದುರಾಗಿದೆ. ವರ್ಷದಲ್ಲಿ ಹಲವು ತಿಂಗಳು ಪ್ರವಾಸಿಗರು ಭೇಟಿ ಕೊಡುವುದಿಲ್ಲ. ಈ ವೇಳೆ ಕಷ್ಟ ಎದುರಾಗುತ್ತದೆ. ಸರ್ಕಾರ ಮಾಸಿಕ ಗೌರವ ಧನ ನಿಗದಿ ಮಾಡಿದರೆ ಅನುಕೂಲವಾಗುತ್ತದೆ. ಸಾಂಸ್ಕೃತಿಕ ರಾಯಭಾರಿಗಳಾಗಿ ಮಾರ್ಗದರ್ಶಿಗಳು ಕೆಲಸ ಮಾಡುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>