‘ಎಲ್ಲ ಮಾರ್ಗದರ್ಶಿಗಳು ಪ್ರವಾಸಿಗರು ಕೊಡುವ ಹಣದಲ್ಲೆ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಸರ್ಕಾರದಿಂದ ಆರ್ಥಿಕ ನೆರವು ಇಲ್ಲದೆ ಸಂಕಷ್ಟ ಎದುರಾಗಿದೆ. ವರ್ಷದಲ್ಲಿ ಹಲವು ತಿಂಗಳು ಪ್ರವಾಸಿಗರು ಭೇಟಿ ಕೊಡುವುದಿಲ್ಲ. ಈ ವೇಳೆ ಕಷ್ಟ ಎದುರಾಗುತ್ತದೆ. ಸರ್ಕಾರ ಮಾಸಿಕ ಗೌರವ ಧನ ನಿಗದಿ ಮಾಡಿದರೆ ಅನುಕೂಲವಾಗುತ್ತದೆ. ಸಾಂಸ್ಕೃತಿಕ ರಾಯಭಾರಿಗಳಾಗಿ ಮಾರ್ಗದರ್ಶಿಗಳು ಕೆಲಸ ಮಾಡುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ’ ಎಂದಿದ್ದಾರೆ.