ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ವಾಸುದೇವ ಬಡಿಗೇರ್, ಬೊಧಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಆನಂದ್ ಸಿಂಗ್ ಅವರಿಗೆ ಮನವಿ ಸಲ್ಲಿಸಿ, ಕುಲಪತಿ ರಮೇಶ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಅವರ ಅವಧಿಯಲ್ಲಿ ಸಿಬ್ಬಂದಿ ಬಹಳ ತೊಂದರೆ ಅನುಭವಿಸಿದ್ದಾರೆ. ಅನೇಕರಿಗೆ ಏಳೆಂಟು ತಿಂಗಳಿಂದ ವೇತನ ಪಾವತಿಸಿಲ್ಲ. ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಿಲ್ಲ. ಫೆ. 21ರಂದು ಅವರ ಅಧಿಕಾರದ ಅವಧಿ ಕೊನೆಗೊಳ್ಳಲಿದೆ. ಅವಧಿ ವಿಸ್ತರಣೆಗೆ ಬಹಳ ಲಾಬಿ ನಡೆಸಿದ್ದಾರೆ. ಅದನ್ನು ತಡೆಯಬೇಕು. ವಿಶ್ವವಿದ್ಯಾಲಯಕ್ಕೆ ಸೂಕ್ತ ವ್ಯಕ್ತಿಯನ್ನು ಕುಲಪತಿಯಾಗಿ ನೇಮಿಸಿ, ಶೈಕ್ಷಣಿಕ ವಾತಾವರಣ ನಿರ್ಮಿಸಬೇಕೆಂದು ಮನವಿ ಮಾಡಿದರು.