ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ೩೦ನೇ ನುಡಿಹಬ್ಬ ನಿಗದಿತ ಸಮಯಕ್ಕಿಂತ ಅರ್ಧಗಂಟೆ ವಿಳಂಬವಾಗಿ ಇಲ್ಲಿ ಶುರುವಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ವೇದಿಕೆಗೆ ಆಗಮಿಸಿದ್ದು, ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿದೆ.
ಸಂಜೆ ೫.೩೦ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ರಾಜ್ಯಪಾಲರು ವಿಳಂಬವಾಗಿ ಬಂದದ್ದರಿಂದ ಅರ್ಧ ಗಂಟೆ ವಿಳಂಬವಾಗಿ ಶುರುವಾಯಿತು.