ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್, ಪ್ರಾಧ್ಯಾಪಕ ಪ್ರೊ.ಸಿ.ಎಸ್. ವಾಸುದೇವನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಜಗಳೂರು ಸಮೀಪದ ಹೆದ್ದಾರಿಯಲ್ಲಿ ನಿಂತ ಲಾರಿಗೆ ಇವರ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾರಿನಲ್ಲಿದ್ದ ಇವರ ಮಗ ಹಾಗೂ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಗೊತ್ತಾಗಿದೆ.
ಪುರಾತತ್ವ ಹಾಗೂ ಇತಿಹಾಸ ವಿಭಾಗದಲ್ಲಿ ಇವರು ಅನೇಕ ವರ್ಷಗಳವರೆಗೆ ಕೆಲಸ ನಿರ್ವಹಿಸಿದ್ದರು. ಹಂಪಿಗೆ ಯಾರೇ ಗಣ್ಯರು ಬಂದರೆ ಸ್ಮಾರಕಗಳ ಬಗ್ಗೆ ಪರಿಚಯ ಮಾಡಿಕೊಡುತ್ತಿದ್ದರು.