‘ಬಡ್ತಿ ಕೊಡಲು ಲಂಚ, ಪಿಂಚಣಿ ಬಿಡುಗಡೆಗೆ ಕಮಿಷನ್ ಕೇಳಲಾಗುತ್ತಿದೆ. ಸಂಶೋಧನಾ ವಿದ್ಯಾರ್ಥಿಗಳ ಕೊಲೊಕ್ವಿಯಂಗೆ ₹50 ಸಾವಿರ ಬೇಡಿಕೆ, ಶಿಷ್ಯವೇತನ ಬಿಡುಗಡೆಗೆ ಹಣ ಕೇಳುತ್ತಿದ್ದಾರೆ ಎಂದು ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳೇ ನೇರ ಆರೋಪ ಮಾಡಿದ್ದಾರೆ. ಇದು ಬಹಳ ಗಂಭೀರವಾದ ವಿಷಯ. ಎಲ್ಲರೂ ತಲೆತಗ್ಗಿಸುವ ವಿಚಾರ. ಈ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.