<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಹಂಪಿ ಸಮೀಪ ಇರುವ ಐತಿಹಾಸಿಕ ಕಮಲಾಪುರ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಶುಕ್ರವಾರ ಕಾಣಿಸಿದ್ದು, ಸ್ಥಳೀಯರು ಮತ್ತು ಮೀನುಗಾರರು ಆತಂಕಗೊಂಡಿದ್ದಾರೆ.</p><p>ಕೆರೆಯ ದಡದಲ್ಲಿ 400ಕ್ಕೂ ಅಧಿಕ ದೊಡ್ಡ ಮೀನುಗಳು ಸತ್ತು ಬಿದ್ದಿರುವುದನ್ನು ಜನರು ಕುತೂಹಲದಿಂದ ನೋಡುತ್ತಿದ್ದು, ಇದಕ್ಕೆ ಕಾರಣ ಏನು ಎಂಬ ಬಗ್ಗೆ ಚರ್ಚಸತೊಡಗಿದ್ದಾರೆ.</p><p>ಮಳೆ ನೀರಿನೊಂದಿಗೆ ಕಲುಷಿತ ನೀರು ಸೇರಿಕೊಂಡು ಮೀನುಗಳು ಸತ್ತಿರಬಹುದು, ಕೃಷಿಗೆ ಬಳಸುವ ರಾಸಾಯನಿಕ ನೀರಿನಲ್ಲಿ ಸೇರಿಯೂ ಈ ರೀತಿ ಸಾಮೂಹಿಕ ಸಾವು ಸಂಭವಿಸಿರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.</p><p>‘ಕೈಗಾರಿಕೆಗಳು ತುಂಗಭದ್ರಾ ಜಲಾಶಯಕ್ಕೆ ಬಿಡುವ ಕಲುಷಿತ ನೀರಿನಿಂದ ಮತ್ತು ಕಮಲಾಪುರದ ಚರಂಡಿಯ ನೀರಿನಿಂದ ಈ ಮೀನುಗಳ ಮಾರಣಹೋಮ ನಡೆದಿರಬಹುದು, ಸರ್ಕಾರ ಕೆರೆಯನ್ನು ಸ್ವಚ್ಛವಾಗಿ ಇಡುವತ್ತ ಗಮನ ಹರಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರೂ ಆಗಿರುವ ಸ್ಥಳೀಯ ನಿವಾಸಿ ಎಚ್.ಜಿ.ಮಲ್ಲಿಕಾರ್ಜುನ ಆಗ್ರಹಿಸಿದ್ದಾರೆ.</p><p><strong>ಐತಿಹಾಸಿಕ ಕೆರೆ:</strong> ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣವಾಗಿದ್ದ ಈ ಕೆರೆಯ ನೀರು ನೂರಾರು ಎಕರೆ ಕೃಷಿ ಜಮೀನಿಗೆ ಆಸರೆಯಾಗಿದೆ. ತುಂಗಭದ್ರಾ ಜಲಾಶಯದಿಂದ ಹರಿದು ಬರುವ ರಾಯ ಕಾಲುವೆಯ ನೀರು ಈ ಕೆರೆಯನ್ನು ಸೇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಹಂಪಿ ಸಮೀಪ ಇರುವ ಐತಿಹಾಸಿಕ ಕಮಲಾಪುರ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಶುಕ್ರವಾರ ಕಾಣಿಸಿದ್ದು, ಸ್ಥಳೀಯರು ಮತ್ತು ಮೀನುಗಾರರು ಆತಂಕಗೊಂಡಿದ್ದಾರೆ.</p><p>ಕೆರೆಯ ದಡದಲ್ಲಿ 400ಕ್ಕೂ ಅಧಿಕ ದೊಡ್ಡ ಮೀನುಗಳು ಸತ್ತು ಬಿದ್ದಿರುವುದನ್ನು ಜನರು ಕುತೂಹಲದಿಂದ ನೋಡುತ್ತಿದ್ದು, ಇದಕ್ಕೆ ಕಾರಣ ಏನು ಎಂಬ ಬಗ್ಗೆ ಚರ್ಚಸತೊಡಗಿದ್ದಾರೆ.</p><p>ಮಳೆ ನೀರಿನೊಂದಿಗೆ ಕಲುಷಿತ ನೀರು ಸೇರಿಕೊಂಡು ಮೀನುಗಳು ಸತ್ತಿರಬಹುದು, ಕೃಷಿಗೆ ಬಳಸುವ ರಾಸಾಯನಿಕ ನೀರಿನಲ್ಲಿ ಸೇರಿಯೂ ಈ ರೀತಿ ಸಾಮೂಹಿಕ ಸಾವು ಸಂಭವಿಸಿರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.</p><p>‘ಕೈಗಾರಿಕೆಗಳು ತುಂಗಭದ್ರಾ ಜಲಾಶಯಕ್ಕೆ ಬಿಡುವ ಕಲುಷಿತ ನೀರಿನಿಂದ ಮತ್ತು ಕಮಲಾಪುರದ ಚರಂಡಿಯ ನೀರಿನಿಂದ ಈ ಮೀನುಗಳ ಮಾರಣಹೋಮ ನಡೆದಿರಬಹುದು, ಸರ್ಕಾರ ಕೆರೆಯನ್ನು ಸ್ವಚ್ಛವಾಗಿ ಇಡುವತ್ತ ಗಮನ ಹರಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರೂ ಆಗಿರುವ ಸ್ಥಳೀಯ ನಿವಾಸಿ ಎಚ್.ಜಿ.ಮಲ್ಲಿಕಾರ್ಜುನ ಆಗ್ರಹಿಸಿದ್ದಾರೆ.</p><p><strong>ಐತಿಹಾಸಿಕ ಕೆರೆ:</strong> ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣವಾಗಿದ್ದ ಈ ಕೆರೆಯ ನೀರು ನೂರಾರು ಎಕರೆ ಕೃಷಿ ಜಮೀನಿಗೆ ಆಸರೆಯಾಗಿದೆ. ತುಂಗಭದ್ರಾ ಜಲಾಶಯದಿಂದ ಹರಿದು ಬರುವ ರಾಯ ಕಾಲುವೆಯ ನೀರು ಈ ಕೆರೆಯನ್ನು ಸೇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>