‘ಹಂಪಿಯ ಎಲ್ಲ ಸ್ಮಾರಕಗಳು, ಕಮಲಾಪುರದಲ್ಲಿನ ವಸ್ತು ಸಂಗ್ರಹಾಲಯ ಗುರುವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು. ಸಾರ್ವಜನಿಕರು ಆನ್ಲೈನ್ ಮತ್ತು ನಾಲ್ಕು ಕೌಂಟರ್ಗಳಲ್ಲಿ ನಗದು ಪಾವತಿಸಿ ಟಿಕೆಟ್ ಪಡೆಯಬಹುದು. ವಿರೂಪಾಕ್ಷೇಶ್ವರ ದೇವಸ್ಥಾನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರಲಿದ್ದು, ಎಂದಿನಂತೆ ನಿರ್ಬಂಧ ಮುಂದುವರಿಯಲಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.