ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಹಂಪಿ‌ ಸ್ಮಾರಕಗಳು ಮುಳುಗಡೆ

Last Updated 26 ಜುಲೈ 2021, 9:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳು ಮುಳುಗಡೆಯಾಗಿವೆ.

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ಸ್ನಾನಘಟ್ಟ, ಚಕ್ರತೀರ್ಥ, ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕಗಳು ಮುಳುಗಡೆಯಾಗಿವೆ.

ಹೊಸಪೇಟೆ-ಗಂಗಾವತಿ ನಡುವೆ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆಗೆ ಸಮನಾಗಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕದೊಂದಿಗೆ ಸಂಪರ್ಕ ಕಡಿತಗೊಂಡಿದೆ.

133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ದ ಜಲಾಶಯದಲ್ಲಿ‌ 32 ಟಿಎಂಸಿ ಹೂಳು ಸಂಗ್ರಹವಾಗಿದ್ದು, ನೀರಿನ ಸಂಗ್ರಹ ಮಟ್ಟ 101 ಟಿಎಂಸಿಗೆ ಕುಸಿದಿದೆ. ಸದ್ಯ 95 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯ ಸಂಪೂರ್ಣ ತುಂಬಲು ಇನ್ನೂ ಆರು ಟಿಎಂಸಿ ನೀರು ಬೇಕು. ಒಳಹರಿವು ಎರಡು ಲಕ್ಷ ಕ್ಯುಸೆಕ್ ಗೂ ಅಧಿಕವಿದೆ. ದಿನಕ್ಕೆ 13ರಿಂದ 14 ಟಿಎಂಸಿ ಅಡಿ ನೀರು ಬರುತ್ತಿರುವುದರಿಂದ 20 ಕ್ರಸ್ಟ್ ಗೇಟ್ ಗಳನ್ನು‌ ತೆರೆದು ನದಿಗೆ ನೀರು‌ ಹರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT