<p><strong>ಹೊಸಪೇಟೆ (ವಿಜಯನಗರ):</strong> ಹಂಪಿಯ ನೆಲಮಹಡಿ ಶಿವ ದೇವಾಲಯದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವತಿಯಿಂದ ನಡೆಯುತ್ತಿರುವ ಪುನಶ್ಚೇತನ ಕಾಮಗಾರಿ ವೇಳೆ ಸ್ಮಾರಕ ಸ್ತಂಭವೊಂದನ್ನು ತುಂಡರಿಸಿದ ಮತ್ತು ಅದನ್ನು ನಾಪತ್ತೆ ಮಾಡಿದ ಕುರಿತಂತೆ ಹಂಪಿ ಠಾಣೆಗೆ ಕಮಲಾಪುರದ ಟಿ.ಶಿವಕುಮಾರ್ ಎಂಬುವವರು ದೂರು ನೀಡಿದ್ದಾರೆ.</p>.<p>‘ಗುತ್ತಿಗೆದಾರ ಪದ್ಮನಾಭ ಅವರಿಗೆ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ. ಶಿವ ದೇವಸ್ಥಾನದ ಬಳಿ ಸೈಡ್ವಾಲ್ ಕಟ್ಟುವ ವೇಳೆ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಕಲ್ಲುಗಳನ್ನು ಯಂತ್ರ ಬಳಸಿ ತುಂಡರಿಸಲಾಗಿತ್ತು. ಡಿ.2ರಂದು ಈ ಬಗ್ಗೆ ಎಎಸ್ಐಗೆ ದೂರು ನೀಡಿದ್ದೆ. ಆದರೆ ಕ್ರಮ ಕೈಗೊಳ್ಳಲಿಲ್ಲ. ಬಳಿಕ ಅದೇ ಪಿಲ್ಲರ್ ಅನ್ನು ಒಡೆದು ಹಾಕಿದ್ದಲ್ಲದೆ, ಬಳಿಕ ಅದನ್ನು ನಾಪತ್ತೆ ಮಾಡಲಾಗಿದೆ, ಹೀಗಾಗಿ ಎಎಸ್ಐ ಅಧೀಕಾರಿಗಳನ್ನು ಸಹ ಕರಿಸಿ ವಿಚಾರಣೆ ನಡೆಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.</p>.<p>ಟಿ.ಶಿವಕುಮಾರ್ ಅವರು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆಯ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿದ್ದಾರೆ. ‘ಸಾರ್ವಜನಿಕರು ಒಂದು ಕಲ್ಲನ್ನು ಎತ್ತಿ ಇಟ್ಟರೆ ಎಎಸ್ಐನವರು ಕೇಸ್ ಹಾಕುತ್ತಾರೆ, ಪುನಶ್ಚೇತನ ಹೆಸರಲ್ಲಿ ಇವರು ಸ್ಮಾರಕ ಕಲ್ಲನ್ನು ನಾಶಪಡಿಸುವುದು ಸರಿಯೇ?’ ಎಂದು ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ದೂರು ಸ್ವೀಕರಿಸಲಾಗಿದೆ, ಅದರ ಬಗ್ಗೆ ಪರಿಶೀಲಿಸಿ, ಎಎಸ್ಐ ಅಧಿಕಾರಿಗಳಿಂದ ವಿವರಣೆ ಪಡೆಯುವ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಹಂಪಿಯ ನೆಲಮಹಡಿ ಶಿವ ದೇವಾಲಯದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವತಿಯಿಂದ ನಡೆಯುತ್ತಿರುವ ಪುನಶ್ಚೇತನ ಕಾಮಗಾರಿ ವೇಳೆ ಸ್ಮಾರಕ ಸ್ತಂಭವೊಂದನ್ನು ತುಂಡರಿಸಿದ ಮತ್ತು ಅದನ್ನು ನಾಪತ್ತೆ ಮಾಡಿದ ಕುರಿತಂತೆ ಹಂಪಿ ಠಾಣೆಗೆ ಕಮಲಾಪುರದ ಟಿ.ಶಿವಕುಮಾರ್ ಎಂಬುವವರು ದೂರು ನೀಡಿದ್ದಾರೆ.</p>.<p>‘ಗುತ್ತಿಗೆದಾರ ಪದ್ಮನಾಭ ಅವರಿಗೆ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ. ಶಿವ ದೇವಸ್ಥಾನದ ಬಳಿ ಸೈಡ್ವಾಲ್ ಕಟ್ಟುವ ವೇಳೆ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಕಲ್ಲುಗಳನ್ನು ಯಂತ್ರ ಬಳಸಿ ತುಂಡರಿಸಲಾಗಿತ್ತು. ಡಿ.2ರಂದು ಈ ಬಗ್ಗೆ ಎಎಸ್ಐಗೆ ದೂರು ನೀಡಿದ್ದೆ. ಆದರೆ ಕ್ರಮ ಕೈಗೊಳ್ಳಲಿಲ್ಲ. ಬಳಿಕ ಅದೇ ಪಿಲ್ಲರ್ ಅನ್ನು ಒಡೆದು ಹಾಕಿದ್ದಲ್ಲದೆ, ಬಳಿಕ ಅದನ್ನು ನಾಪತ್ತೆ ಮಾಡಲಾಗಿದೆ, ಹೀಗಾಗಿ ಎಎಸ್ಐ ಅಧೀಕಾರಿಗಳನ್ನು ಸಹ ಕರಿಸಿ ವಿಚಾರಣೆ ನಡೆಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.</p>.<p>ಟಿ.ಶಿವಕುಮಾರ್ ಅವರು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆಯ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿದ್ದಾರೆ. ‘ಸಾರ್ವಜನಿಕರು ಒಂದು ಕಲ್ಲನ್ನು ಎತ್ತಿ ಇಟ್ಟರೆ ಎಎಸ್ಐನವರು ಕೇಸ್ ಹಾಕುತ್ತಾರೆ, ಪುನಶ್ಚೇತನ ಹೆಸರಲ್ಲಿ ಇವರು ಸ್ಮಾರಕ ಕಲ್ಲನ್ನು ನಾಶಪಡಿಸುವುದು ಸರಿಯೇ?’ ಎಂದು ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ದೂರು ಸ್ವೀಕರಿಸಲಾಗಿದೆ, ಅದರ ಬಗ್ಗೆ ಪರಿಶೀಲಿಸಿ, ಎಎಸ್ಐ ಅಧಿಕಾರಿಗಳಿಂದ ವಿವರಣೆ ಪಡೆಯುವ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>