<p><strong>ಹೊಸಪೇಟೆ (ವಿಜಯನಗರ):</strong> ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ರಕ್ಷಣೆ ಜತೆಗೆ ಸುಸ್ಥಿರ ಅಭಿವೃದ್ಧಿಗೆ, ಮೂಲಸೌಲಭ್ಯ ವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರವಾಸಿ ಮಾರ್ಗದರ್ಶಿಗಳ ಸಂಘ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಲ್ಲಿ ಮನವಿ ಮಾಡಿದೆ.</p><p>ಹಂಪಿ ಪ್ರವಾಸದಲ್ಲಿರುವ ಸಚಿವರನ್ನು ಮಂಗಳವಾರ ಭೇಟಿ ಮಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ವಿ.ವಿರೂಪಾಕ್ಷಿ ಮತ್ತು ಇತರ ಮಾರ್ಗದರ್ಶಿಗಳು, ಹಲವು ಬೇಡಿಕೆಗಳು ಇರುವ ಮನವಿಪತ್ರ ಸಲ್ಲಿಸಿದರು.</p><p>ಹಂಪಿಗೆ ಅಗತ್ಯವಾಗಿ ತುರ್ತು ವೈದ್ಯಕೀಯ ಸೌಲಭ್ಯಗಳು ಬೇಕಾಗಿವೆ. ಮುಖ್ಯವಾಗಿ ಪ್ರಥಮ ಚಿಕಿತ್ಸೆ ಕೇಂದ್ರ, ಆಂಬುಲೆನ್ಸ್ ಒದಗಿಸಬೇಕು. ಬಿಸಿಲು ಸಂಬಂಧಿತ ತೊಂದರೆಗಳಿಂದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಬೇಕು ಎಂದೂ ಒತ್ತಾಯಿಸಲಾಗಿದೆ.</p><p>ಪ್ರವಾಸಿ ಮಾರ್ಗದರ್ಶಿಗಳು ಪ್ರವಾಸಿ ಸ್ಥಳಗಳ ನಿಜವಾದ ರಾಯಭಾರಿಗಳಾಗಿದ್ದು, ಅವರಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸಬೇಕು, ಉಚಿತ ಅಥವಾ ರಿಯಾಯಿತಿ ದರದಲ್ಲಿ ರೈಲ್ವೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಸಹ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ರಕ್ಷಣೆ ಜತೆಗೆ ಸುಸ್ಥಿರ ಅಭಿವೃದ್ಧಿಗೆ, ಮೂಲಸೌಲಭ್ಯ ವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರವಾಸಿ ಮಾರ್ಗದರ್ಶಿಗಳ ಸಂಘ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಲ್ಲಿ ಮನವಿ ಮಾಡಿದೆ.</p><p>ಹಂಪಿ ಪ್ರವಾಸದಲ್ಲಿರುವ ಸಚಿವರನ್ನು ಮಂಗಳವಾರ ಭೇಟಿ ಮಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ವಿ.ವಿರೂಪಾಕ್ಷಿ ಮತ್ತು ಇತರ ಮಾರ್ಗದರ್ಶಿಗಳು, ಹಲವು ಬೇಡಿಕೆಗಳು ಇರುವ ಮನವಿಪತ್ರ ಸಲ್ಲಿಸಿದರು.</p><p>ಹಂಪಿಗೆ ಅಗತ್ಯವಾಗಿ ತುರ್ತು ವೈದ್ಯಕೀಯ ಸೌಲಭ್ಯಗಳು ಬೇಕಾಗಿವೆ. ಮುಖ್ಯವಾಗಿ ಪ್ರಥಮ ಚಿಕಿತ್ಸೆ ಕೇಂದ್ರ, ಆಂಬುಲೆನ್ಸ್ ಒದಗಿಸಬೇಕು. ಬಿಸಿಲು ಸಂಬಂಧಿತ ತೊಂದರೆಗಳಿಂದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಬೇಕು ಎಂದೂ ಒತ್ತಾಯಿಸಲಾಗಿದೆ.</p><p>ಪ್ರವಾಸಿ ಮಾರ್ಗದರ್ಶಿಗಳು ಪ್ರವಾಸಿ ಸ್ಥಳಗಳ ನಿಜವಾದ ರಾಯಭಾರಿಗಳಾಗಿದ್ದು, ಅವರಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸಬೇಕು, ಉಚಿತ ಅಥವಾ ರಿಯಾಯಿತಿ ದರದಲ್ಲಿ ರೈಲ್ವೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಸಹ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>