ಹೊಸಪೇಟೆ (ವಿಜಯನಗರ): ಆಜಾನ್ಗೆ ಪ್ರತಿಯಾಗಿ ಶ್ರೀರಾಮ ಸೇನೆ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಹನುಮಾನ ಚಾಲೀಸಾ ಪಠಣ ಮಾಡಿದರು.
ಸುಪ್ರಭಾತದ ಸಮಯದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನ, ಅಶ್ವತ್ಥನಾರಾಯಣ ಕಟ್ಟೆಯ ಅಭಯ ಆಂಜನೇಯ ದೇವಸ್ಥಾನ ಹಾಗೂ ಚಿತ್ತವಾಡ್ಗಿ ಕಲ್ಮಠದಲ್ಲಿ ಹನುಮಾನ್ ಚಾಲೀಸಾ ಪಠಿಸಿದರು.
ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಸಂಜೀವ್ ಮರಡಿ, ತಾಲ್ಲೂಕು ಅಧ್ಯಕ್ಷ ಜಗದೀಶ್ ಕಾಮಟಗಿ, ಉಪಾಧ್ಯಕ್ಷ ಸೂರಿ ಬಂಗಾರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಪಿಐಗಳಾದ ಶ್ರೀನಿವಾಸ್, ಜಯಪ್ರಕಾಶ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.