<p>ಹರಪನಹಳ್ಳಿ: ‘ಮದ್ಯವ್ಯಸನ ಕೇವಲ ವ್ಯಕ್ತಿಗೆ ಮಾತ್ರವಲ್ಲ ಇಡೀ ಕುಟುಂಬ ಮತ್ತು ಸಮಾಜಕ್ಕೂ ಹಾನಿ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳಿಗೆ ಮತ್ತು ಅನೇಕ ಕುಟುಂಬಗಳು ಬೀದಿಗೆ ಬರಲು ಈ ಕುಡಿತದ ಚಟವೇ ಮುಖ್ಯ ಕಾರಣ’ ಎಂದು ಹರಪನಹಳ್ಳಿ ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ತೀವ್ರ ಕಳಕಳಿ ವ್ಯಕ್ತಪಡಿಸಿದರು.</p>.<p>ನಗರಕ್ಕೆ ಸಮೀಪದ ತಾಲ್ಲೂಕಿನ ದೇವರ ತಿಮ್ಮಾಲಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ 2060ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಚಟಕ್ಕೆ ಬೀಳುತ್ತಿರುವುದು ಆತಂಕಕಾರಿ. ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು, ಅವರ ದಿನಚರಿಯ ಮೇಲೆ ನಿಗಾ ಇಡಬೇಕು. ಕಳೆದುಹೋದ ಕೌಟುಂಬಿಕ ನೆಮ್ಮದಿಯನ್ನು ಮರಳಿ ತರಲು ಇಂತಹ ಮದ್ಯವರ್ಜನ ಶಿಬಿರಗಳು ದಾರಿದೀಪವಾಗಲಿವೆ’ ಎಂದರು.</p>.<p>ಯೋಗ ಶಿಕ್ಷಕಿ ಕುಸುಮ ಜಗದೀಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಗುಂಡಗತ್ತಿ ಮಂಜುನಾಥ ಮಾತನಾಡಿದರು. ಸಮಿತಿ ಅಧ್ಯಕ್ಷ ಸಾಸ್ವಿಹಳ್ಳಿ ಎಂ.ಪಿ. ಹಾಲೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖಂಡರಾದ ಗುಡಿಹಳ್ಳಿ ಹಾಲೇಶ್, ಪ್ರವೀಣ್ ಕುಮಾರ್, ಕೆ.ಎನ್. ಸಿದ್ದೇಶ್ ಬೂದಿಹಾಳ್, ಮಾದಪುರ ನೀಲಪ್ಪ, ಯೋಜನಾಧಿಕಾರಿ ಗಣಪತಿ ಭಟ್, ಗುಂಡಗತ್ತಿ ಸಿದ್ದೇಶ್, ಅರುಣ್, ಶಾರದಾ, ಎಸ್.ಪಿ. ಲಿಂಬ್ಯಾನಾಯ್ಕ್, ಮಮತಾ, ಶೈಲಾಜಾ, ಬಿ. ನಾಗರಾಜ್, ಕುಮಾರ ಟಿ., ರಂಜಿತಾ ಎನ್., ರುದ್ರಪ್ಪ ಹೂಗಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-939798318</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ‘ಮದ್ಯವ್ಯಸನ ಕೇವಲ ವ್ಯಕ್ತಿಗೆ ಮಾತ್ರವಲ್ಲ ಇಡೀ ಕುಟುಂಬ ಮತ್ತು ಸಮಾಜಕ್ಕೂ ಹಾನಿ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳಿಗೆ ಮತ್ತು ಅನೇಕ ಕುಟುಂಬಗಳು ಬೀದಿಗೆ ಬರಲು ಈ ಕುಡಿತದ ಚಟವೇ ಮುಖ್ಯ ಕಾರಣ’ ಎಂದು ಹರಪನಹಳ್ಳಿ ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ತೀವ್ರ ಕಳಕಳಿ ವ್ಯಕ್ತಪಡಿಸಿದರು.</p>.<p>ನಗರಕ್ಕೆ ಸಮೀಪದ ತಾಲ್ಲೂಕಿನ ದೇವರ ತಿಮ್ಮಾಲಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ 2060ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಚಟಕ್ಕೆ ಬೀಳುತ್ತಿರುವುದು ಆತಂಕಕಾರಿ. ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು, ಅವರ ದಿನಚರಿಯ ಮೇಲೆ ನಿಗಾ ಇಡಬೇಕು. ಕಳೆದುಹೋದ ಕೌಟುಂಬಿಕ ನೆಮ್ಮದಿಯನ್ನು ಮರಳಿ ತರಲು ಇಂತಹ ಮದ್ಯವರ್ಜನ ಶಿಬಿರಗಳು ದಾರಿದೀಪವಾಗಲಿವೆ’ ಎಂದರು.</p>.<p>ಯೋಗ ಶಿಕ್ಷಕಿ ಕುಸುಮ ಜಗದೀಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಗುಂಡಗತ್ತಿ ಮಂಜುನಾಥ ಮಾತನಾಡಿದರು. ಸಮಿತಿ ಅಧ್ಯಕ್ಷ ಸಾಸ್ವಿಹಳ್ಳಿ ಎಂ.ಪಿ. ಹಾಲೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖಂಡರಾದ ಗುಡಿಹಳ್ಳಿ ಹಾಲೇಶ್, ಪ್ರವೀಣ್ ಕುಮಾರ್, ಕೆ.ಎನ್. ಸಿದ್ದೇಶ್ ಬೂದಿಹಾಳ್, ಮಾದಪುರ ನೀಲಪ್ಪ, ಯೋಜನಾಧಿಕಾರಿ ಗಣಪತಿ ಭಟ್, ಗುಂಡಗತ್ತಿ ಸಿದ್ದೇಶ್, ಅರುಣ್, ಶಾರದಾ, ಎಸ್.ಪಿ. ಲಿಂಬ್ಯಾನಾಯ್ಕ್, ಮಮತಾ, ಶೈಲಾಜಾ, ಬಿ. ನಾಗರಾಜ್, ಕುಮಾರ ಟಿ., ರಂಜಿತಾ ಎನ್., ರುದ್ರಪ್ಪ ಹೂಗಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-939798318</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>