<p>ಹರಪನಹಳ್ಳಿ: ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಅರಸೀಕೆರೆ ಗ್ರಾಮದ ಅಲ್ತಾಫ್, ದಾವಣಗೆರೆ ಜಿಲ್ಲೆ ಬಾನುವಳ್ಳಿಯ ಜಾಬೀರ್, ಶಿಂಗ್ರಿಹಳ್ಳಿಯ ಶಾಹೀದ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ ₹6.65 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸುದ್ದಿಗಾರಿಗೆ ತಿಳಿಸಿದರು.</p>.<p>‘ತಾಲ್ಲೂಕಿನ ಯು. ಬೇವಿನಹಳ್ಳಿ ದೊಡ್ಡ ತಾಂಡಾದ ಲೋಕೇಶ್ ರಾಥೋಡ್ ಎಂಬುವವರ ಫೆಬ್ರುವರಿಯಲ್ಲಿ, ಮಾದಿಹಳ್ಳಿಯ ಸಲೀಂ ಸಾಬ್ ಅವರ ಬೈಕ್ ಹಾಗೂ ₹2,800 ನಗದು ಮಾರ್ಚ್ 31ರಂದು ಕಳವಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು. ಪೊಲೀಸರ ತಂಡಗಳನ್ನು ರಚಿಸಿ, ತನಿಖೆ ಚುರುಕುಗೊಳಿಸಿದಾಗ ಆರೋಪಿಗಳು ಸೆರೆಯಾಗಿದ್ದಾರೆ’ ಎಂದರು.</p>.<p>ಡಿವೈಎಸ್ಪಿ ಸಂತೋಷ್ ಚೌಹಾಣ್, ಸಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ವಿಜಯ್ ಕೃಷ್ಣ, ಸಿಬ್ಬಂದಿ ಹರೀಶ್ ದೇವರಟ್ಟಿ, ಕೆ. ಗುರುರಾಜ್, ದಾದಾಪೀರ್, ಅಜ್ಜಪ್ಪ, ಹಸನ್ ಸಾಬ್, ವಿಷ್ಣುನಾಯ್ಕ್, ಗುರ್ಯಾನಾಯ್ಕ್, ಕೂಲಹಳ್ಳಿ ಎಂ. ಕೊಟ್ರೇಶ್ ಮತ್ತು ರವಿನಾಯ್ಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-25-385334672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಅರಸೀಕೆರೆ ಗ್ರಾಮದ ಅಲ್ತಾಫ್, ದಾವಣಗೆರೆ ಜಿಲ್ಲೆ ಬಾನುವಳ್ಳಿಯ ಜಾಬೀರ್, ಶಿಂಗ್ರಿಹಳ್ಳಿಯ ಶಾಹೀದ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ ₹6.65 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸುದ್ದಿಗಾರಿಗೆ ತಿಳಿಸಿದರು.</p>.<p>‘ತಾಲ್ಲೂಕಿನ ಯು. ಬೇವಿನಹಳ್ಳಿ ದೊಡ್ಡ ತಾಂಡಾದ ಲೋಕೇಶ್ ರಾಥೋಡ್ ಎಂಬುವವರ ಫೆಬ್ರುವರಿಯಲ್ಲಿ, ಮಾದಿಹಳ್ಳಿಯ ಸಲೀಂ ಸಾಬ್ ಅವರ ಬೈಕ್ ಹಾಗೂ ₹2,800 ನಗದು ಮಾರ್ಚ್ 31ರಂದು ಕಳವಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು. ಪೊಲೀಸರ ತಂಡಗಳನ್ನು ರಚಿಸಿ, ತನಿಖೆ ಚುರುಕುಗೊಳಿಸಿದಾಗ ಆರೋಪಿಗಳು ಸೆರೆಯಾಗಿದ್ದಾರೆ’ ಎಂದರು.</p>.<p>ಡಿವೈಎಸ್ಪಿ ಸಂತೋಷ್ ಚೌಹಾಣ್, ಸಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ವಿಜಯ್ ಕೃಷ್ಣ, ಸಿಬ್ಬಂದಿ ಹರೀಶ್ ದೇವರಟ್ಟಿ, ಕೆ. ಗುರುರಾಜ್, ದಾದಾಪೀರ್, ಅಜ್ಜಪ್ಪ, ಹಸನ್ ಸಾಬ್, ವಿಷ್ಣುನಾಯ್ಕ್, ಗುರ್ಯಾನಾಯ್ಕ್, ಕೂಲಹಳ್ಳಿ ಎಂ. ಕೊಟ್ರೇಶ್ ಮತ್ತು ರವಿನಾಯ್ಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-25-385334672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>