<p>ಹರಪನಹಳ್ಳಿ: ಜಮೀನಿನಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ 400 ಕೆವಿ ವಿದ್ಯುತ್ ಟವರ್ (ಗೋಪುರ) ನಿರ್ಮಿಸಲು ಮುಂದಾಗಿರುವ ಸರ್ಕಾರದ ಯೋಜನೆಗೆ ಹರಪನಹಳ್ಳಿ ಹಾಗೂ ಹಡಗಲಿ ಭಾಗದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಲವು ರೈತರು, ಭೂಮಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಜೀವನ ಈ ಯೋಜನೆಯಿಂದ ದುಸ್ತರವಾಗಲಿದೆ ಎಂದು ತಮ್ಮ ಅಳಲು ತೋಡಿಕೊಂಡರು.</p>.<p>ಮೈದೂರು ಗ್ರಾಮದ ರೈತ ಶ್ರೀನಿವಾಸ ಗೌಡ ಮಾತನಾಡಿ, ಹೊಲಗಳಲ್ಲಿ ಹೈ-ಟೆನ್ಷನ್ ವಿದ್ಯುತ್ ಲೈನ್ಗಳು ಹಾದುಹೋಗುವುದರಿಂದ ವಿದ್ಯುತ್ ಗೋಪುರದ ಕೆಳಗೆ ಯಾವುದೇ ರೀತಿಯ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುವುದಿಲ್ಲ. ಹೈ-ಲೈನ್ ಕೆಳಗೆ ಕೆಲಸ ಮಾಡಲು ತೀವ್ರ ಅಪಾಯ ಇರುವುದರಿಂದ ಜಮೀನುಗಳಿಗೆ ಬರಲು ಕೂಲಿ ಕಾರ್ಮಿಕರು ಹಿಂಜರಿಯುತ್ತಿದ್ದಾರೆ. ಇದು ರೈತರ ಹಾಗೂ ಕಾರ್ಮಿಕರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ ಎಂದರು.</p>.<p>ಪ್ರಗತಿಪರ ರೈತ ಪ್ರದೀಪ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಮ್ಮ 6 ಎಕರೆ ಜಮೀನಿನಲ್ಲಿ ಗೋಪುರ ನಿರ್ಮಿಸಲು ಮುಂದಾಗಿದ್ದಾರೆ. ಅಲ್ಲಿ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆ ನಡೆಸಿ, ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ದೊಡ್ಡ ಯೋಜನೆ ಹೊಂದಿದ್ದೆವು. ಈಗ ಈ ಗೋಪುರದಿಂದ ನಮ್ಮ ಕನಸು ಕನಸಾಗಿಯೇ ಉಳಿಯುವಂತಾಗಿದೆ. ಸರ್ಕಾರ ನಮಗೆ ಶಾಶ್ವತ ಪರಿಹಾರ ನೀಡಬೇಕು. ಇಲ್ಲವೇ ವಾರ್ಷಿಕ ಗೌರವಧನ ನೀಡುವ ಯೋಜನೆ ತರಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮೈದೂರು ಗ್ರಾಮದ ಚನ್ನಬಸವನಗೌಡ, ನಾಗರಾಜ್, ಕೆಂಚಪ್ಪ, ನಿಂಗಪ್ಪ, ,ತಳಕಲ್ಲು ಗ್ರಾಮದ ಎಂ. ಚನ್ನಬಸನಗೌಡ, ಕರೆಗೌಡ, ಶಿವಕುಮಾರ, ಉತ್ತಂಗಿ ಬಸವನಗೌಡ, ಬೇವೂರು ಪಂಪನಗೌಡ, ಕುಂಟನಗೌಡ, ಇಟ್ಟಗಿ ಚನ್ನಬಸಪ್ಪ, ಕೆಂಚಪ್ಪ, ಸೋಮನಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-951011926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ಜಮೀನಿನಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ 400 ಕೆವಿ ವಿದ್ಯುತ್ ಟವರ್ (ಗೋಪುರ) ನಿರ್ಮಿಸಲು ಮುಂದಾಗಿರುವ ಸರ್ಕಾರದ ಯೋಜನೆಗೆ ಹರಪನಹಳ್ಳಿ ಹಾಗೂ ಹಡಗಲಿ ಭಾಗದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಲವು ರೈತರು, ಭೂಮಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಜೀವನ ಈ ಯೋಜನೆಯಿಂದ ದುಸ್ತರವಾಗಲಿದೆ ಎಂದು ತಮ್ಮ ಅಳಲು ತೋಡಿಕೊಂಡರು.</p>.<p>ಮೈದೂರು ಗ್ರಾಮದ ರೈತ ಶ್ರೀನಿವಾಸ ಗೌಡ ಮಾತನಾಡಿ, ಹೊಲಗಳಲ್ಲಿ ಹೈ-ಟೆನ್ಷನ್ ವಿದ್ಯುತ್ ಲೈನ್ಗಳು ಹಾದುಹೋಗುವುದರಿಂದ ವಿದ್ಯುತ್ ಗೋಪುರದ ಕೆಳಗೆ ಯಾವುದೇ ರೀತಿಯ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುವುದಿಲ್ಲ. ಹೈ-ಲೈನ್ ಕೆಳಗೆ ಕೆಲಸ ಮಾಡಲು ತೀವ್ರ ಅಪಾಯ ಇರುವುದರಿಂದ ಜಮೀನುಗಳಿಗೆ ಬರಲು ಕೂಲಿ ಕಾರ್ಮಿಕರು ಹಿಂಜರಿಯುತ್ತಿದ್ದಾರೆ. ಇದು ರೈತರ ಹಾಗೂ ಕಾರ್ಮಿಕರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ ಎಂದರು.</p>.<p>ಪ್ರಗತಿಪರ ರೈತ ಪ್ರದೀಪ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಮ್ಮ 6 ಎಕರೆ ಜಮೀನಿನಲ್ಲಿ ಗೋಪುರ ನಿರ್ಮಿಸಲು ಮುಂದಾಗಿದ್ದಾರೆ. ಅಲ್ಲಿ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆ ನಡೆಸಿ, ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ದೊಡ್ಡ ಯೋಜನೆ ಹೊಂದಿದ್ದೆವು. ಈಗ ಈ ಗೋಪುರದಿಂದ ನಮ್ಮ ಕನಸು ಕನಸಾಗಿಯೇ ಉಳಿಯುವಂತಾಗಿದೆ. ಸರ್ಕಾರ ನಮಗೆ ಶಾಶ್ವತ ಪರಿಹಾರ ನೀಡಬೇಕು. ಇಲ್ಲವೇ ವಾರ್ಷಿಕ ಗೌರವಧನ ನೀಡುವ ಯೋಜನೆ ತರಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮೈದೂರು ಗ್ರಾಮದ ಚನ್ನಬಸವನಗೌಡ, ನಾಗರಾಜ್, ಕೆಂಚಪ್ಪ, ನಿಂಗಪ್ಪ, ,ತಳಕಲ್ಲು ಗ್ರಾಮದ ಎಂ. ಚನ್ನಬಸನಗೌಡ, ಕರೆಗೌಡ, ಶಿವಕುಮಾರ, ಉತ್ತಂಗಿ ಬಸವನಗೌಡ, ಬೇವೂರು ಪಂಪನಗೌಡ, ಕುಂಟನಗೌಡ, ಇಟ್ಟಗಿ ಚನ್ನಬಸಪ್ಪ, ಕೆಂಚಪ್ಪ, ಸೋಮನಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-951011926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>