<p>ಹರಪನಹಳ್ಳಿ: ‘200 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿರುವ ಹಿರೆಕೆರೆ ಒತ್ತುವರಿಯಾಗಿದ್ದು, ಒತ್ತುವರಿ ಮಾಡಿದವರಿಗೆ ನೋಟಿಸ್ ಜಾರಿಗೊಳಿಸಬೇಕು. ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಬೇಕು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಹಿರೆಕೆರೆ ಏರಿಯ ಮೇಲೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ₹3 ಕೋಟಿ ವೆಚ್ಚದ ಹಿರೆಕೆರೆ ಅಭಿವೃದ್ದಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ–ಮಹಾರಾಜರು ವೈಜ್ಞಾನಿಕವಾಗಿ ಕೆರೆಗಳನ್ನು ಕಟ್ಟಿಸಿದ್ದಾರೆ. ಇವುಗಳಲ್ಲಿ ನೀರು ಸಂಗ್ರಹವಾದಷ್ಟೂ ವರ್ಷ ಅಂತರ್ಜಲ ಸಮೃದ್ದವಾಗಿರುತ್ತದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಆಗಬೇಕು’ ಎಂದರು.</p>.<p>‘ಅಯ್ಯನಕೆರೆಯು ಸಂಪೂರ್ಣ ಮಲಿನಗೊಂಡಿದೆ. ₹100 ಕೋಟಿ ವೆಚ್ಚ ಮಾಡಿದರೂ ಮೊದಲಿನ ಸ್ಥಿತಿಗೆ ಅದನ್ನು ತರಲಾಗದಷ್ಟು ಹದಗೆಟ್ಟಿದೆ. 10 ದಿನಗಳಿಂದ ಪೌರಕಾರ್ಮಿಕರು ಹಾಗೂ ಯಂತ್ರಗಳ ಮೂಲಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದರೂ, ಕಸದ ರಾಶಿ ಖಾಲಿಯಾಗಿಲ್ಲ’ ಎಂದು ತಿಳಿಸಿದರು.</p>.<p>‘₹3 ಕೋಟಿ ವೆಚ್ಚದಲ್ಲಿ ಹಿರೆಕೆರೆಯಲ್ಲಿ ಜಾಲಿ ಮುಳ್ಳು ತೆಗೆಯುವುದು, ಕೆರೆ ಏರಿ ವಿಸ್ತರಣೆ, ಪಾದಚಾರಿ ಮಾರ್ಗ, ಕಿರುಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳ ಮೂಲಕ ಅಭಿವೃದ್ದಿ ಮಾಡಲಾಗುತ್ತದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಡಿ. ಅಬ್ದುಲ್ ರೆಹಮಾನ್, ಎಚ್. ವಸಂತಪ್ಪ, ಎಂ.ವಿ. ಅಂಜಿನಪ್ಪ, ವೆಂಕಟೇಶ್, ಹುಲಿಕಟ್ಟೆ ಚಂದ್ರಪ್ಪ, ಇಜಂತಕರ ಮಂಜುನಾಥ, ಉಮಾ ಮಹೇಶ್ವರಿ, ಶಂಕರ, ಮಂಜನಾಯ್ಕ, ಸಲೀಂಸಾಬ್, ನಜೀರ್, ಲಾಟಿ ದಾದಾಪೀರ, ಗುಡಿ ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-69328452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ‘200 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿರುವ ಹಿರೆಕೆರೆ ಒತ್ತುವರಿಯಾಗಿದ್ದು, ಒತ್ತುವರಿ ಮಾಡಿದವರಿಗೆ ನೋಟಿಸ್ ಜಾರಿಗೊಳಿಸಬೇಕು. ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಬೇಕು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಹಿರೆಕೆರೆ ಏರಿಯ ಮೇಲೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ₹3 ಕೋಟಿ ವೆಚ್ಚದ ಹಿರೆಕೆರೆ ಅಭಿವೃದ್ದಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ–ಮಹಾರಾಜರು ವೈಜ್ಞಾನಿಕವಾಗಿ ಕೆರೆಗಳನ್ನು ಕಟ್ಟಿಸಿದ್ದಾರೆ. ಇವುಗಳಲ್ಲಿ ನೀರು ಸಂಗ್ರಹವಾದಷ್ಟೂ ವರ್ಷ ಅಂತರ್ಜಲ ಸಮೃದ್ದವಾಗಿರುತ್ತದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಆಗಬೇಕು’ ಎಂದರು.</p>.<p>‘ಅಯ್ಯನಕೆರೆಯು ಸಂಪೂರ್ಣ ಮಲಿನಗೊಂಡಿದೆ. ₹100 ಕೋಟಿ ವೆಚ್ಚ ಮಾಡಿದರೂ ಮೊದಲಿನ ಸ್ಥಿತಿಗೆ ಅದನ್ನು ತರಲಾಗದಷ್ಟು ಹದಗೆಟ್ಟಿದೆ. 10 ದಿನಗಳಿಂದ ಪೌರಕಾರ್ಮಿಕರು ಹಾಗೂ ಯಂತ್ರಗಳ ಮೂಲಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದರೂ, ಕಸದ ರಾಶಿ ಖಾಲಿಯಾಗಿಲ್ಲ’ ಎಂದು ತಿಳಿಸಿದರು.</p>.<p>‘₹3 ಕೋಟಿ ವೆಚ್ಚದಲ್ಲಿ ಹಿರೆಕೆರೆಯಲ್ಲಿ ಜಾಲಿ ಮುಳ್ಳು ತೆಗೆಯುವುದು, ಕೆರೆ ಏರಿ ವಿಸ್ತರಣೆ, ಪಾದಚಾರಿ ಮಾರ್ಗ, ಕಿರುಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳ ಮೂಲಕ ಅಭಿವೃದ್ದಿ ಮಾಡಲಾಗುತ್ತದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಡಿ. ಅಬ್ದುಲ್ ರೆಹಮಾನ್, ಎಚ್. ವಸಂತಪ್ಪ, ಎಂ.ವಿ. ಅಂಜಿನಪ್ಪ, ವೆಂಕಟೇಶ್, ಹುಲಿಕಟ್ಟೆ ಚಂದ್ರಪ್ಪ, ಇಜಂತಕರ ಮಂಜುನಾಥ, ಉಮಾ ಮಹೇಶ್ವರಿ, ಶಂಕರ, ಮಂಜನಾಯ್ಕ, ಸಲೀಂಸಾಬ್, ನಜೀರ್, ಲಾಟಿ ದಾದಾಪೀರ, ಗುಡಿ ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-69328452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>