<p>ಹರಪನಹಳ್ಳಿ: ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿಯ ನೂತನ ರಥ ಗುರುವಾರ ಸಂಜೆ ಲೋಕಾರ್ಪಣೆಗೊಂಡಿತು. ಹುಣ್ಣಿಮೆ ದಿನ ಭಕ್ತರು ಭಕ್ತರು ಎಳೆಯುವ ಮೂಲಕ ರಥೋತ್ಸವ ಆಚರಿಸಿದರು.</p>.<p>ಅಲಂಕೃತ ಪಲ್ಲಕ್ಕಿಯಲ್ಲಿ ಸ್ವಾಮಿ ಪ್ರತಿಷ್ಠಾಪಿಸಿ ನೂತನ ರಥದ ಬಳಿ ಮೆರವಣಿಗೆ ಮೂಲಕ ಕರೆತರಲಾಯಿತು. ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ನಡೆದ ಹರಾಜಿನಲ್ಲಿ ಸ್ವಾಮಿ ಧ್ವಜವನ್ನು ಭಕ್ತರಾದ ರೂಪ ಅವರು ₹1.70 ಲಕ್ಷಕ್ಕೆ ಪಡೆದುಕೊಂಡರು. ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಲ್ಲಿಸಿದರು. ಧರ್ಮಕರ್ತ ಡಾ.ಹರ್ಷ ಕಟ್ಟಿ, ಅರ್ಚಕರು ಹಾಗೂ ಆಂಜನೇಯ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಇದ್ದರು.</p>.<p>ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಮತ್ತು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಜೋಡಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದವು. ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಭಕ್ತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-25-1738543192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿಯ ನೂತನ ರಥ ಗುರುವಾರ ಸಂಜೆ ಲೋಕಾರ್ಪಣೆಗೊಂಡಿತು. ಹುಣ್ಣಿಮೆ ದಿನ ಭಕ್ತರು ಭಕ್ತರು ಎಳೆಯುವ ಮೂಲಕ ರಥೋತ್ಸವ ಆಚರಿಸಿದರು.</p>.<p>ಅಲಂಕೃತ ಪಲ್ಲಕ್ಕಿಯಲ್ಲಿ ಸ್ವಾಮಿ ಪ್ರತಿಷ್ಠಾಪಿಸಿ ನೂತನ ರಥದ ಬಳಿ ಮೆರವಣಿಗೆ ಮೂಲಕ ಕರೆತರಲಾಯಿತು. ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ನಡೆದ ಹರಾಜಿನಲ್ಲಿ ಸ್ವಾಮಿ ಧ್ವಜವನ್ನು ಭಕ್ತರಾದ ರೂಪ ಅವರು ₹1.70 ಲಕ್ಷಕ್ಕೆ ಪಡೆದುಕೊಂಡರು. ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಲ್ಲಿಸಿದರು. ಧರ್ಮಕರ್ತ ಡಾ.ಹರ್ಷ ಕಟ್ಟಿ, ಅರ್ಚಕರು ಹಾಗೂ ಆಂಜನೇಯ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಇದ್ದರು.</p>.<p>ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಮತ್ತು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಜೋಡಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದವು. ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಭಕ್ತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-25-1738543192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>