<p>ಹರಪನಹಳ್ಳಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿರುವ ಸರ್ಕಾರಿ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಪ್ರತಿ ಕ್ವಿಂಟಲ್ಗೆ 3 ಕೆ.ಜಿ. ಹೆಚ್ಚುವರಿ ರಾಗಿ ಪಡೆಯಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈತರು ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ರಾಗಿ ಖರೀದಿಯ ಗುತ್ತಿಗೆ ಪಡೆದಿರುವ ಖಾಸಗಿ ಏಜೆನ್ಸಿಯವರು ಅಕ್ರಮವಾಗಿ ತೂಕ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದರೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ’ ಎಂದು ರೈತ ಮುಖಂಡ ಎಚ್. ಹನುಮಂತಪ್ಪ ಆರೋಪಿಸಿದರು.</p>.<p>ಅಕ್ರಮದಲ್ಲಿ ತೊಡಗಿರುವ ಏಜೆನ್ಸಿಯ ಪರವಾನಗಿ ಕೂಡಲೇ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಬೇಕು. ಇದುವರೆಗೆ ರೈತರಿಂದ ಹೆಚ್ಚುವರಿಯಾಗಿ ಪಡೆದ ರಾಗಿಗೆ ತಕ್ಕ ಮೊತ್ತ ನೀಡಬೇಕು. ತೂಕದ ಅಕ್ರಮ ತಡೆಗೆ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ರೈತರಾದ ಹನುಮಂತಪ್ಪ, ಮಹಾಂತೇಶ ನೀಲಗುಂದ, ಕೆಂಚಪ್ಪ, ಅಂಜಿನಪ್ಪ, ಕೋಡಿಹಳ್ಳಿ ಮಲ್ಲಿಕಾರ್ಜುನ, ಕನ್ನವಳ್ಳಿ ಸುರೇಶ, ಪ್ರಭು ಶೃಂಗಾರತೋಟ, ಗಂಗಾನಾಯ್ಕ, ಕಾಳ್ಯನಾಯ್ಕ, ಮಹಮ್ಮದ್ ರಫಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-25-487214502</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿರುವ ಸರ್ಕಾರಿ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಪ್ರತಿ ಕ್ವಿಂಟಲ್ಗೆ 3 ಕೆ.ಜಿ. ಹೆಚ್ಚುವರಿ ರಾಗಿ ಪಡೆಯಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈತರು ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ರಾಗಿ ಖರೀದಿಯ ಗುತ್ತಿಗೆ ಪಡೆದಿರುವ ಖಾಸಗಿ ಏಜೆನ್ಸಿಯವರು ಅಕ್ರಮವಾಗಿ ತೂಕ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದರೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ’ ಎಂದು ರೈತ ಮುಖಂಡ ಎಚ್. ಹನುಮಂತಪ್ಪ ಆರೋಪಿಸಿದರು.</p>.<p>ಅಕ್ರಮದಲ್ಲಿ ತೊಡಗಿರುವ ಏಜೆನ್ಸಿಯ ಪರವಾನಗಿ ಕೂಡಲೇ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಬೇಕು. ಇದುವರೆಗೆ ರೈತರಿಂದ ಹೆಚ್ಚುವರಿಯಾಗಿ ಪಡೆದ ರಾಗಿಗೆ ತಕ್ಕ ಮೊತ್ತ ನೀಡಬೇಕು. ತೂಕದ ಅಕ್ರಮ ತಡೆಗೆ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ರೈತರಾದ ಹನುಮಂತಪ್ಪ, ಮಹಾಂತೇಶ ನೀಲಗುಂದ, ಕೆಂಚಪ್ಪ, ಅಂಜಿನಪ್ಪ, ಕೋಡಿಹಳ್ಳಿ ಮಲ್ಲಿಕಾರ್ಜುನ, ಕನ್ನವಳ್ಳಿ ಸುರೇಶ, ಪ್ರಭು ಶೃಂಗಾರತೋಟ, ಗಂಗಾನಾಯ್ಕ, ಕಾಳ್ಯನಾಯ್ಕ, ಮಹಮ್ಮದ್ ರಫಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-25-487214502</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>