ರಾಜ್ಯ ಸರ್ಕಾರವು ಅಕ್ಟೋಬರ್ 1ರಂದು ಕೆ.ಎಂ. ಗಾಯತ್ರಿ ಅವರನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗ ನೇಮಕ ಮಾಡಿತ್ತು. ಆದರೆ, ಅವರು ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನವೇ ಅವರ ವರ್ಗಾವಣೆ ಆದೇಶ ರದ್ದುಗೊಳಿಸಿ, ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಅವರಿಗೆ ಹೆಚ್ಚುವರಿ ಹೊಣೆ ನೀಡಿತ್ತು. ಈಗ ಹರ್ಷಲ್ ಅವರನ್ನು ನೇಮಿಸಿ, ಅನಿರುದ್ಧ್ ಅವರನ್ನು ಹೆಚ್ಚುವರಿ ಹೊಣೆಯಿಂದ ಬಿಡುಗಡೆಗೊಳಿಸಿದೆ.
ಇದರೊಂದಿಗೆ ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ನೇಮಕಗೊಂಡಂತಾಗಿದೆ.