ʼವಿದ್ಯಾವಂತರಲ್ಲಿಯೇ ನೈತಿಕ ಶಿಕ್ಷಣ, ಸಂಸ್ಕಾರದ ಕೊರತೆ ಇದ್ದಾಗ, ಸಮಾಜದಲ್ಲಿ ಅಸ್ತವ್ಯಸ್ತತೆ ಸಂಭವಿಸುತ್ತವೆ. ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಬೇಕು. ಕಷ್ಟಗಳನ್ನು ಅನುಭವಿಸಿದ ವಿದ್ಯಾರ್ಥಿ, ಭವಿಷ್ಯದಲ್ಲಿ ಉನ್ನತ ಗುರಿ ಸಾಧಿಸುತ್ತಾನೆ. ಅಂತಹ ಶಕ್ತಿ, ಸಾಮರ್ಥ್ಯ, ಆತ್ಮವಿಶ್ವಾಸ ಹೆಚ್ಚಿಸುವ ಜವಬ್ದಾರಿ ಇಂದಿನ ಶಿಕ್ಷಕರ ಮೇಲಿದೆ. ಅಂಕ ಗಳಿಕೆ ಫಲಿತಾಂಶಕ್ಕಿಂತ ಸಾಮಾಜಿಕ ಪ್ರಜ್ಞೆ ಬೆಳೆಸಿ, ಆದರ್ಶ ಪ್ರಜೆಗಳನ್ನಾಗಿ ನಿರ್ಮಾಣ ಮಾಡಿ ಎಂದರು.