ದಿನವಿಡೀ ಕಾರ್ಮೋಡ ಕವಿದಿತ್ತು. ಸಂಜೆ 5.45ರಿಂದ 7 ಗಂಟೆಯ ವರೆಗೆ ಎಡೆಬಿಡದೇ ಜೋರು ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಎರಡು ವಾರಗಳಿಂದ ಜಿಲ್ಲೆಯಾದ್ಯಂತ ಮಳೆಯಾಗಿರಲಿಲ್ಲ. ತಾಲ್ಲೂಕಿನ ಹೊಸೂರು, ಇಪ್ಪಿತ್ತೇರಿ ಮಾಗಾಣಿ, ನಾಗೇನಹಳ್ಳಿ, ಬಸವನದುರ್ಗ, ಕಾಳಘಟ್ಟ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.