ಬಿರುಗಾಳಿ ಮಳೆಗೆ ತಾಲ್ಲೂಕಿನ ಚಿತ್ತವಾಡ್ಗಿ, ಕರೇಕಲ್ಲು ಮಾಗಾಣಿ, ಇಪ್ಪಿತ್ತೇರಿ ಮಾಗಾಣಿ, ಬಸವನದುರ್ಗ, ಹೊಸೂರು, 88 ಮುದ್ಲಾಪುರ, ನಾಗಲಾಪುರದಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಅನೇಕ ರೈತರು ಎಂದಿನಂತೆ ಸೋಮವಾರ ಬೆಳಿಗ್ಗೆ ಅವರ ಗದ್ದೆಗಳಿಗೆ ನೀರು ಹರಿಸಲು ಹೋಗಿದ್ದರು. ಆದರೆ, ಬಿರುಗಾಳಿಗೆ ಬಾಳೆ ಗಿಡಗಳು ಮುರಿದು ಬಿದ್ದಿರುವುದನ್ನು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.