ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.
ಬಿರುಸಿನ ವರ್ಷಧಾರೆಗೆ ಜಿಲ್ಲೆಯ ಚೆಕ್ ಡ್ಯಾಂಕ, ಹಳ್ಳಗಳು ತುಂಬಿ ಹರಿದಿವೆ. ಚರಂಡಿಗಳು ಉಕ್ಕಿ ಹರಿದು ರಸ್ತೆಯ ಮೇಲೆಲ್ಲಾ ನೀರು ಸಂಗ್ರಹಗೊಂಡಿರುವುದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.
ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಿಗೇರಿ ಕ್ರಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯ ಕೂಡ್ಲಿಗಿ, ಕೊಟ್ಟೂರು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಲಿ ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ ಭಾರಿ ಮಳೆಯಾಗಿದೆ.
ಬೆಳಿಗ್ಗೆ ಐದು ಗಂಟೆಗೆ ಆರಂಭಗೊಂಡಿರುವ ಮಳೆಈಗಲೂ ಮುಂದುವರೆದಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲ ಶಾಲೆಯವರು ರಜೆ ಘೋಷಿಸಿದ್ದಾರೆ.