ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆಯಲ್ಲಿ ಬಿರುಸಿನ ಮಳೆ; ಜನಜೀವನ ಅಸ್ತವ್ಯಸ್ತ

Last Updated 17 ಜುಲೈ 2021, 16:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಹಲವು ಭಾಗಗಳಲ್ಲಿ ಶನಿವಾರ ಬಿರುಸಿನ ಮಳೆಯಾಗಿದೆ.

ಬೆಳಿಗ್ಗೆಯಿಂದಲೇ ಕಾರ್ಮೋಡ ಕವಿದಿತ್ತು. ಮಧ್ಯಾಹ್ನ ಕೆಲಸಮಯ ಜಿಟಿಜಿಟಿ ಮಳೆಯಾಯಿತು. ಸಂಜೆಯ ವರೆಗೆ ಬಿಡುವು ಕೊಟ್ಟ ವರುಣ, ಬಳಿಕ ತನ್ನ ಆರ್ಭಟ ತೋರಿಸಿದ.

ಎರಡು ಗಂಟೆಗೂ ಹೆಚ್ಚು ಸಮಯ ಸುರಿದ ಬಿರುಸಿನ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿತು. ಇದರಿಂದಾಗಿ ವಾಹನಗಳು ನಿಧಾನ ಗತಿಯಲ್ಲಿ ಸಂಚರಿಸಿದವು. ಜನಜೀವನ ಅಸ್ತವ್ಯಸ್ತಗೊಂಡಿತು.

ನಗರದ ಕಾಲೇಜು ರಸ್ತೆ, ಸಾಯಿಬಾಬಾ ವೃತ್ತ, ಟಿ.ಬಿ. ಡ್ಯಾಂ ರಸ್ತೆ, ಸಂಡೂರು ರಸ್ತೆಯಲ್ಲಿ ಅಪಾರ ನೀರು ಜಮಾವಣೆಗೊಂಡಿತು.

ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರಿನಲ್ಲೂ ಉತ್ತಮ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT