<p><strong>ಹೊಸಪೇಟೆ (ವಿಜಯನಗರ):</strong> ಮಲೆನಾಡು ಹಾಗೂ ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 1.08 ಲಕ್ಷ ಕ್ಯುಸೆಕ್ಗೆ ಹೆಚ್ಚಳವಾಗಿದೆ.</p><p>105 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 40.13 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ ಇದೇ ರೀತಿ ಮುಂದುವರಿದರೆ ಇನ್ನೊಂದು ವಾರದಲ್ಲಿ ಜಲಾಶಯ ಬಹುತೇಕ ಭರ್ತಿಯಾಗುವ ಸಾಧ್ಯತೆ ಇದೆ.</p><p>1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿನ ನೀರಿನ ಮಟ್ಟ ಸದ್ಯ 1,611.27 ಅಡಿಯಷ್ಟಿದೆ. ಒಂದೇ ದಿನದಲ್ಲಿ ನೀರಿನ ಮಟ್ಟ 5 ಅಡಿಯಷ್ಟು ಹೆಚ್ಚಳವಾಗಿದೆ. ಜುಲೈ 3ರಂದು ನೀರಿನ ಮಟ್ಟ 1,576.50 ಅಡಿಗೆ ಕುಸಿದಿತ್ತು. ಅಂದು ಜಲಾಶಯದ ನೀರಿನ ಸಂಗ್ರಹ 3 ಟಿಎಂಸಿ ಅಡಿಯಷ್ಟು ಮಾತ್ರ ಇತ್ತು. ವಿಳಂಬವಾಗಿಯಾದರೂ ಉತ್ತಮ ಮಳೆ ಆಗುತ್ತಿರುವ ಕಾರಣ ಕೇವಲ 23 ದಿನಗಳಲ್ಲಿ ನೀರಿನ ಮಟಟ 35 ಅಡಿಗಳಷ್ಟು ಏರಿಕೆಯಾಗಿದೆ.</p>.<p>4 ತಾಲ್ಲೂಕುಗಳ ಶಾಲೆಗಳಿಗೆ ಇಂದೂ ರಜೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು ಮತ್ತು ಹೂವಿನಹಡಗಲಿ ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಬುಧವಾರವೂ ಈ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. </p><p>ಈ ಮಧ್ಯೆ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ಹಾಗೂ ಬಳ್ಳಾರಿ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮಲೆನಾಡು ಹಾಗೂ ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 1.08 ಲಕ್ಷ ಕ್ಯುಸೆಕ್ಗೆ ಹೆಚ್ಚಳವಾಗಿದೆ.</p><p>105 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 40.13 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ ಇದೇ ರೀತಿ ಮುಂದುವರಿದರೆ ಇನ್ನೊಂದು ವಾರದಲ್ಲಿ ಜಲಾಶಯ ಬಹುತೇಕ ಭರ್ತಿಯಾಗುವ ಸಾಧ್ಯತೆ ಇದೆ.</p><p>1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿನ ನೀರಿನ ಮಟ್ಟ ಸದ್ಯ 1,611.27 ಅಡಿಯಷ್ಟಿದೆ. ಒಂದೇ ದಿನದಲ್ಲಿ ನೀರಿನ ಮಟ್ಟ 5 ಅಡಿಯಷ್ಟು ಹೆಚ್ಚಳವಾಗಿದೆ. ಜುಲೈ 3ರಂದು ನೀರಿನ ಮಟ್ಟ 1,576.50 ಅಡಿಗೆ ಕುಸಿದಿತ್ತು. ಅಂದು ಜಲಾಶಯದ ನೀರಿನ ಸಂಗ್ರಹ 3 ಟಿಎಂಸಿ ಅಡಿಯಷ್ಟು ಮಾತ್ರ ಇತ್ತು. ವಿಳಂಬವಾಗಿಯಾದರೂ ಉತ್ತಮ ಮಳೆ ಆಗುತ್ತಿರುವ ಕಾರಣ ಕೇವಲ 23 ದಿನಗಳಲ್ಲಿ ನೀರಿನ ಮಟಟ 35 ಅಡಿಗಳಷ್ಟು ಏರಿಕೆಯಾಗಿದೆ.</p>.<p>4 ತಾಲ್ಲೂಕುಗಳ ಶಾಲೆಗಳಿಗೆ ಇಂದೂ ರಜೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು ಮತ್ತು ಹೂವಿನಹಡಗಲಿ ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಬುಧವಾರವೂ ಈ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. </p><p>ಈ ಮಧ್ಯೆ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ಹಾಗೂ ಬಳ್ಳಾರಿ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>