ಬಹಳ ಸಮಯದಿಂದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿರಲಿಲ್ಲ. ಈಗ ಮಾಡಲಾಗುತ್ತಿದೆ. ಇದರಲ್ಲಿ ಹೊಸತೇನು ಇಲ್ಲ. ರೂಟೀನ್ ವರ್ಗಾವಣೆ ಇದು.ಉದ್ದೇಶಪೂರ್ವಕವಾಗಿ ಯಾರನ್ನೂ ವರ್ಗಾವಣೆ ಮಾಡುತ್ತಿಲ್ಲ. ರಾಜ್ಯದಲ್ಲಿ ಹೆಚ್ಚು ಕಮ್ಮಿ ಎಲ್ಲ ಅಧಿಕಾರಿಗಳು ದಕ್ಷರಾಗಿದ್ದಾರೆ. ಹೀಗಾಗಿಯೇ ಕರ್ನಾಟಕದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿದೆ ಎಂದರು.