<p><strong>ಹೂವಿನಹಡಗಲಿ</strong>: ಇಲ್ಲಿನ ಪುರಸಭೆಯ ಲೆಕ್ಕಾಧಿಕಾರಿ ವಿಜಯಕುಮಾರ್ ಕನಕಗಿರಿ (40) ಬುಧವಾರ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ತೀವ್ರ ಹೃದಯಾಘಾತದಿಂದ ನಿಧನರಾದರು.</p><p>ಬೆಳಿಗ್ಗೆ ತಮ್ಮ ಶಾಖೆಯಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ಕುಳಿತ ಕುರ್ಚಿಯಲ್ಲೇ ಎರಗಿದರು. ಸಿಬ್ಬಂದಿ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು.</p><p>ವಿಜಯಕುಮಾರ್ ಕೊಪ್ಪಳ ನಗರ ನಿವಾಸಿಯಾಗಿದ್ದು, ಅವರಿಗೆ ಪತ್ನಿ, 6 ತಿಂಗಳ ಗಂಡು ಮಗು ಇದೆ. ಕೊಪ್ಪಳ ನಗರದಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ಇಲ್ಲಿನ ಪುರಸಭೆಯ ಲೆಕ್ಕಾಧಿಕಾರಿ ವಿಜಯಕುಮಾರ್ ಕನಕಗಿರಿ (40) ಬುಧವಾರ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ತೀವ್ರ ಹೃದಯಾಘಾತದಿಂದ ನಿಧನರಾದರು.</p><p>ಬೆಳಿಗ್ಗೆ ತಮ್ಮ ಶಾಖೆಯಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ಕುಳಿತ ಕುರ್ಚಿಯಲ್ಲೇ ಎರಗಿದರು. ಸಿಬ್ಬಂದಿ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು.</p><p>ವಿಜಯಕುಮಾರ್ ಕೊಪ್ಪಳ ನಗರ ನಿವಾಸಿಯಾಗಿದ್ದು, ಅವರಿಗೆ ಪತ್ನಿ, 6 ತಿಂಗಳ ಗಂಡು ಮಗು ಇದೆ. ಕೊಪ್ಪಳ ನಗರದಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>