<p>ಹೂವಿನಹಡಗಲಿ:‘ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗ ಬಾರದು. ಯಾವುದೇ ತಾಂತ್ರಿಕ ಅಡೆತಡೆಗಳಿದ್ದಲ್ಲಿ ಅಧಿಕಾರಿಗಳು ಸರಿಪಡಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ.ಭರತ್ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಬಡವರ ಬದುಕಿಗೆ ಆಸರೆಯಾಗಿವೆ. ಅನರ್ಹರು ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜೆಸ್ಕಾಂನ ಮೀಟರ್ಗಳು ಗ್ರಾಮೀಣ ಪ್ರದೇಶದಲ್ಲಿ ಗೃಹಜ್ಯೋತಿ ಶೂನ್ಯ ಬಿಲ್ಗಳನ್ನು ನೀಡುತ್ತಿಲ್ಲ. ಪ್ರತಿ ಸಭೆಯಲ್ಲೂ ಈ ವಿಚಾರ ಪ್ರಸ್ತಾಪಿಸಿದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ’ ಎಂದು ಸದಸ್ಯ ಜಿ.ಶಿವಕುಮಾರಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೃಷಿ ಪಂಪ್ಸೆಟ್ಗಳ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯವನ್ನು ಜೆಸ್ಕಾಂನವರು ಸಕಾಲದಲ್ಲಿ ಮಾಡದೆ ಗ್ರಾಹಕರನ್ನು ಅಲೆದಾಡಿಸುತ್ತಾರೆ. ಕೇಳಿದಷ್ಟು ಹಣ ಕೊಟ್ಟರೆ ಮಾತ್ರ ಪರಿವರ್ತಕಗಳನ್ನು ಕೊಡುತ್ತಾರೆ ಎಂದು ಸದಸ್ಯರು ಆರೋಪಿಸಿದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಜಿ. ಪರಮೇಶ್ವರ, ಜಿಲ್ಲಾ ಸಮಿತಿ ಸದಸ್ಯ ಗುರುವಿನ ರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-25-593040697</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ:‘ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗ ಬಾರದು. ಯಾವುದೇ ತಾಂತ್ರಿಕ ಅಡೆತಡೆಗಳಿದ್ದಲ್ಲಿ ಅಧಿಕಾರಿಗಳು ಸರಿಪಡಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ.ಭರತ್ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಬಡವರ ಬದುಕಿಗೆ ಆಸರೆಯಾಗಿವೆ. ಅನರ್ಹರು ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜೆಸ್ಕಾಂನ ಮೀಟರ್ಗಳು ಗ್ರಾಮೀಣ ಪ್ರದೇಶದಲ್ಲಿ ಗೃಹಜ್ಯೋತಿ ಶೂನ್ಯ ಬಿಲ್ಗಳನ್ನು ನೀಡುತ್ತಿಲ್ಲ. ಪ್ರತಿ ಸಭೆಯಲ್ಲೂ ಈ ವಿಚಾರ ಪ್ರಸ್ತಾಪಿಸಿದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ’ ಎಂದು ಸದಸ್ಯ ಜಿ.ಶಿವಕುಮಾರಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೃಷಿ ಪಂಪ್ಸೆಟ್ಗಳ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯವನ್ನು ಜೆಸ್ಕಾಂನವರು ಸಕಾಲದಲ್ಲಿ ಮಾಡದೆ ಗ್ರಾಹಕರನ್ನು ಅಲೆದಾಡಿಸುತ್ತಾರೆ. ಕೇಳಿದಷ್ಟು ಹಣ ಕೊಟ್ಟರೆ ಮಾತ್ರ ಪರಿವರ್ತಕಗಳನ್ನು ಕೊಡುತ್ತಾರೆ ಎಂದು ಸದಸ್ಯರು ಆರೋಪಿಸಿದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಜಿ. ಪರಮೇಶ್ವರ, ಜಿಲ್ಲಾ ಸಮಿತಿ ಸದಸ್ಯ ಗುರುವಿನ ರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-25-593040697</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>