<p>ಹೊಸಪೇಟೆ (ವಿಜಯನಗರ): ನಗರದ ಮೇನ್ಬಜಾರ್ನಿಂದ ಬಳ್ಳಾರಿ ರಸ್ತೆ ಅಭಿವೃದ್ಧಿಗೊಳಿಸುವ ಸಂದರ್ಭದಲ್ಲಿ ತೆರವುಗೊಂಡಿದ್ದ ಪ್ರಾಚೀನ ಕಾಲದ ಕಾಳಿಕಾ ದೇವಿ ದೇವಸ್ಥಾನವನ್ನು ಬಳ್ಳಾರಿ ರಸ್ತೆಯ ಕಂಚುಗಾರಪೇಟೆಯಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದು, ಭಾನುವಾರ ಮೂರ್ತಿಗಳಿಗೆ ಪ್ರಾಣಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ನಡೆಯಿತು.</p>.<p>ಕಳೆದ 15 ವರ್ಷಗಳಿಂದ ಕಾಳಿಕಾದೇವಿಯನ್ನು ಬಾಲಾಲಯವೊಂದರಲ್ಲಿ ಪೂಜಿಸಲಾಗುತ್ತಿತ್ತು. ದೇವಸ್ಥಾನದ ನವೀಕರಣದೊಂದಿಗೆ ದೇವಿಯ ಅಜ್ಞಾತವಾಸ ಕೊನೆಗೊಂಡಿದೆ.</p>.<p>ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಆನೆಗುಂದಿ ಮಹಾಸಂಸ್ಥಾನ ಮಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಹೊಸಪೇಟೆ ನಗರದ ಏಕೈಕ ಕಾಳಿಕಾ ದೇವಸ್ಥಾನ ಪುನರ್ನವೀಕರಣಗೊಂಡು ಪೂಜೆಗೊಳ್ಳುತ್ತಿರುವುದು ಸಂತಸದ ವಿಚಾರ, ಸಮುದಾಯದವರು ಹಾಗೂ ಊರವರ ಒಗ್ಗಟ್ಟಿನಿಂದ ಈ ಕೆಲಸ ಸಾಧ್ಯವಾಗಿದೆ ಎಂದರು.</p>.<p>ನೂತನ ಗರ್ಭಗುಡಿಯ ಆಲಯ ಸಮರ್ಪಣೆ, ಕಾಳಿಕಾದೇವಿ ಕಮಟೇಶ್ವರ ದೇವರ ಹಾಗೂ ಪರಿಹಾರ ದೇವರ ಅಷ್ಟಬಂಧ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಹಾಗೂ ನವಚಂಡಿ ಯಾಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 30ರಿಂದ ಆರಂಭವಾಗಿದ್ದವು. 30ರಂದು ಮೂರ್ತಿಗಳ ಭವ್ಯ ಮೆರವಣಿಗೆ ನಗರದಲ್ಲಿ ನಡೆದಿತ್ತು.</p>.<p>ನಾಗಮೂರ್ತಿಯೇಂದ್ರ ಸ್ವಾಮಿಗಳು, ನಾಗಲಿಂಗ ಸ್ವಾಮಿಗಳು, ಗುರುನಾಥ ಸ್ವಾಮಿಗಳ ಸಾನಿಧ್ಯದಲ್ಲಿ, ತಡಚೆಲ್ಲಿ ವೀರ ರಾಘವ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.</p>.<p>ದೇವಸ್ಥಾನಕ್ಕೆ ಒಟ್ಟು ₹1.50 ಕೋಟಿ ವೆಚ್ಚವಾಗಿದ್ದು, ಈ ಪೈಕಿ ₹35 ಲಕ್ಷವನ್ನು ಶಾಸಕ ಎಚ್.ಆರ್.ಗವಿಯಪ್ಪ ಅವರು ದೇಣಿಗೆಯಾಗಿ ನೀಡಿದ್ದರು. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ಸನ್ಮಾನಿಸಲಾಯಿತು.</p>.<p>ವಿಶ್ವಕರ್ಮ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ವಿ.ಪತ್ತಾರ್, ಪ್ರಧಾನ ಕಾರ್ಯದರ್ಶಿ ನಾಗರಾಜ್, ತಾಲ್ಲೂಕು ಉಪಾಧ್ಯಕ್ಷ ವಿ. ಶಂಕರಾಚಾರ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್, ಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ರಾಜಶೇಖರ್, ಕುಬೇರಚಾರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-1127171669</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ನಗರದ ಮೇನ್ಬಜಾರ್ನಿಂದ ಬಳ್ಳಾರಿ ರಸ್ತೆ ಅಭಿವೃದ್ಧಿಗೊಳಿಸುವ ಸಂದರ್ಭದಲ್ಲಿ ತೆರವುಗೊಂಡಿದ್ದ ಪ್ರಾಚೀನ ಕಾಲದ ಕಾಳಿಕಾ ದೇವಿ ದೇವಸ್ಥಾನವನ್ನು ಬಳ್ಳಾರಿ ರಸ್ತೆಯ ಕಂಚುಗಾರಪೇಟೆಯಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದು, ಭಾನುವಾರ ಮೂರ್ತಿಗಳಿಗೆ ಪ್ರಾಣಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ನಡೆಯಿತು.</p>.<p>ಕಳೆದ 15 ವರ್ಷಗಳಿಂದ ಕಾಳಿಕಾದೇವಿಯನ್ನು ಬಾಲಾಲಯವೊಂದರಲ್ಲಿ ಪೂಜಿಸಲಾಗುತ್ತಿತ್ತು. ದೇವಸ್ಥಾನದ ನವೀಕರಣದೊಂದಿಗೆ ದೇವಿಯ ಅಜ್ಞಾತವಾಸ ಕೊನೆಗೊಂಡಿದೆ.</p>.<p>ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಆನೆಗುಂದಿ ಮಹಾಸಂಸ್ಥಾನ ಮಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಹೊಸಪೇಟೆ ನಗರದ ಏಕೈಕ ಕಾಳಿಕಾ ದೇವಸ್ಥಾನ ಪುನರ್ನವೀಕರಣಗೊಂಡು ಪೂಜೆಗೊಳ್ಳುತ್ತಿರುವುದು ಸಂತಸದ ವಿಚಾರ, ಸಮುದಾಯದವರು ಹಾಗೂ ಊರವರ ಒಗ್ಗಟ್ಟಿನಿಂದ ಈ ಕೆಲಸ ಸಾಧ್ಯವಾಗಿದೆ ಎಂದರು.</p>.<p>ನೂತನ ಗರ್ಭಗುಡಿಯ ಆಲಯ ಸಮರ್ಪಣೆ, ಕಾಳಿಕಾದೇವಿ ಕಮಟೇಶ್ವರ ದೇವರ ಹಾಗೂ ಪರಿಹಾರ ದೇವರ ಅಷ್ಟಬಂಧ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಹಾಗೂ ನವಚಂಡಿ ಯಾಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 30ರಿಂದ ಆರಂಭವಾಗಿದ್ದವು. 30ರಂದು ಮೂರ್ತಿಗಳ ಭವ್ಯ ಮೆರವಣಿಗೆ ನಗರದಲ್ಲಿ ನಡೆದಿತ್ತು.</p>.<p>ನಾಗಮೂರ್ತಿಯೇಂದ್ರ ಸ್ವಾಮಿಗಳು, ನಾಗಲಿಂಗ ಸ್ವಾಮಿಗಳು, ಗುರುನಾಥ ಸ್ವಾಮಿಗಳ ಸಾನಿಧ್ಯದಲ್ಲಿ, ತಡಚೆಲ್ಲಿ ವೀರ ರಾಘವ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.</p>.<p>ದೇವಸ್ಥಾನಕ್ಕೆ ಒಟ್ಟು ₹1.50 ಕೋಟಿ ವೆಚ್ಚವಾಗಿದ್ದು, ಈ ಪೈಕಿ ₹35 ಲಕ್ಷವನ್ನು ಶಾಸಕ ಎಚ್.ಆರ್.ಗವಿಯಪ್ಪ ಅವರು ದೇಣಿಗೆಯಾಗಿ ನೀಡಿದ್ದರು. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ಸನ್ಮಾನಿಸಲಾಯಿತು.</p>.<p>ವಿಶ್ವಕರ್ಮ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ವಿ.ಪತ್ತಾರ್, ಪ್ರಧಾನ ಕಾರ್ಯದರ್ಶಿ ನಾಗರಾಜ್, ತಾಲ್ಲೂಕು ಉಪಾಧ್ಯಕ್ಷ ವಿ. ಶಂಕರಾಚಾರ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್, ಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ರಾಜಶೇಖರ್, ಕುಬೇರಚಾರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-1127171669</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>