<p><strong>ಹೊಸಪೇಟೆ</strong>: ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರು ಮಕ್ಕಳು ಮತ್ತು ಆರು ತಾಯಂದಿರನ್ನು ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ರಕ್ಷಿಸಿವೆ.</p>.<p>ಇಲ್ಲಿನ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಪುಸ್ತಕ ಮಾರಾಟದ ಮೂಲಕ ಮಕ್ಕಳು, ತಾಯಂದಿರು ಭಿಕ್ಷೆ ಬೇಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಳೆ ಈ ಮಕ್ಕಳು ಮತ್ತು ತಾಯಂದಿರು ಪತ್ತೆಯಾದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಳ್ಳಾರಿಯ ಗುಡಾರ ನಗರ, ಕೊಪ್ಪಳ ಮತ್ತು ಕಾರಟಗಿ ತಾಲ್ಲೂಕಿನ ಸಿದ್ದಾಪುರದ ಮಕ್ಕಳು ಮತ್ತು ತಾಯಂದಿರು ಭಿಕ್ಷಾಟನೆ ಮಾಡುತ್ತಿರುವ ಮಾಹಿತಿ ಲಭಿಸಿತ್ತು. ವಿಜಯನಗರದ ಮಕ್ಕಳ ರಕ್ಷಣಾ ಘಟಕ, ಅಕ್ಕ ಪಡೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸರ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಿ ಈ ರಕ್ಷಣಾ ಕಾರ್ಯ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-152952679</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರು ಮಕ್ಕಳು ಮತ್ತು ಆರು ತಾಯಂದಿರನ್ನು ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ರಕ್ಷಿಸಿವೆ.</p>.<p>ಇಲ್ಲಿನ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಪುಸ್ತಕ ಮಾರಾಟದ ಮೂಲಕ ಮಕ್ಕಳು, ತಾಯಂದಿರು ಭಿಕ್ಷೆ ಬೇಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಳೆ ಈ ಮಕ್ಕಳು ಮತ್ತು ತಾಯಂದಿರು ಪತ್ತೆಯಾದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಳ್ಳಾರಿಯ ಗುಡಾರ ನಗರ, ಕೊಪ್ಪಳ ಮತ್ತು ಕಾರಟಗಿ ತಾಲ್ಲೂಕಿನ ಸಿದ್ದಾಪುರದ ಮಕ್ಕಳು ಮತ್ತು ತಾಯಂದಿರು ಭಿಕ್ಷಾಟನೆ ಮಾಡುತ್ತಿರುವ ಮಾಹಿತಿ ಲಭಿಸಿತ್ತು. ವಿಜಯನಗರದ ಮಕ್ಕಳ ರಕ್ಷಣಾ ಘಟಕ, ಅಕ್ಕ ಪಡೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸರ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಿ ಈ ರಕ್ಷಣಾ ಕಾರ್ಯ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-152952679</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>