<p><strong>ಹೊಸಪೇಟೆ(ವಿಜಯನಗರ): </strong>ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದವರು ಬಿಜೆಪಿ ಸೇರುವುದು ಮುಂದುವರೆದಿದೆ.</p>.<p>18ನೇ ವಾರ್ಡಿನಿಂದ ಪಕ್ಷೇತರರಾಗಿ ಜಯಿಸಿದ್ದ ಕಿರಣ್ ಭಾನುವಾರ ನಗರದಲ್ಲಿ ಬಿಜೆಪಿ ಸೇರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಕಿರಣ್ ಅವರಿಗೆ ಬಿಜೆಪಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.</p>.<p>18ನೇ ವಾರ್ಡಿನಿಂದ ಬಿಜೆಪಿಯಿಂದ ಸ್ಪರ್ಧಿಸಲು ಕಿರಣ್ ಬಯಸಿದ್ದರು. ಆದರೆ, ಪಕ್ಷ ಅವರಿಗೆ ಟಿಕೆಟ್ ನೀಡಿರಲಿಲ್ಲ. ಪಕ್ಷದಿಂದ ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿ 991 ಮತಗಳ ಅಂತರದಿಂದ ಕಿರಣ್ ಜಯಶಾಲಿಯಾಗಿದ್ದರು.</p>.<p>ಒಟ್ಟು 35 ಸದಸ್ಯ ಬಲದ ಹೊಸಪೇಟೆ ನಗರಸಭೆಯಲ್ಲಿ ಕಾಂಗ್ರೆಸ್ ಹಾಗೂ ಪಕ್ಷೇತರರು ತಲಾ 12 ಸ್ಥಾನಗಳಲ್ಲಿ ಗೆದ್ದಿದ್ದರು. ಬಿಜೆಪಿ 10, ಎಎಪಿಯಿಂದ ಒಬ್ಬ ಅಭ್ಯರ್ಥಿ ಗೆದ್ದಿದ್ದರು. ಜನವರಿ 6ರಂದು 8 ಜನ ಪಕ್ಷೇತರರು, ಎಎಪಿ ಸದಸ್ಯ ಬಿಜೆಪಿ ಸೇರಿದ್ದರು. ಅದರ ಬೆನ್ನಲ್ಲೇ ಇನ್ನೊಬ್ಬ ಪಕ್ಷೇತರ ಸದಸ್ಯ ಭಾನುವಾರ ಬಿಜೆಪಿ ಸೇರಿದ್ದಾರೆ. ಇದರೊಂದಿಗೆ ಬಿಜೆಪಿಯ ಒಟ್ಟು ಸಂಖ್ಯಾಬಲ 20ಕ್ಕೆ ಏರಿಕೆಯಾಗಿದೆ. ಬಿಜೆಪಿ ಅಧಿಕಾರದ ಗದ್ದುಗೆಯೇರಲು ಮಾರ್ಗ ಪ್ರಶಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ): </strong>ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದವರು ಬಿಜೆಪಿ ಸೇರುವುದು ಮುಂದುವರೆದಿದೆ.</p>.<p>18ನೇ ವಾರ್ಡಿನಿಂದ ಪಕ್ಷೇತರರಾಗಿ ಜಯಿಸಿದ್ದ ಕಿರಣ್ ಭಾನುವಾರ ನಗರದಲ್ಲಿ ಬಿಜೆಪಿ ಸೇರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಕಿರಣ್ ಅವರಿಗೆ ಬಿಜೆಪಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.</p>.<p>18ನೇ ವಾರ್ಡಿನಿಂದ ಬಿಜೆಪಿಯಿಂದ ಸ್ಪರ್ಧಿಸಲು ಕಿರಣ್ ಬಯಸಿದ್ದರು. ಆದರೆ, ಪಕ್ಷ ಅವರಿಗೆ ಟಿಕೆಟ್ ನೀಡಿರಲಿಲ್ಲ. ಪಕ್ಷದಿಂದ ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿ 991 ಮತಗಳ ಅಂತರದಿಂದ ಕಿರಣ್ ಜಯಶಾಲಿಯಾಗಿದ್ದರು.</p>.<p>ಒಟ್ಟು 35 ಸದಸ್ಯ ಬಲದ ಹೊಸಪೇಟೆ ನಗರಸಭೆಯಲ್ಲಿ ಕಾಂಗ್ರೆಸ್ ಹಾಗೂ ಪಕ್ಷೇತರರು ತಲಾ 12 ಸ್ಥಾನಗಳಲ್ಲಿ ಗೆದ್ದಿದ್ದರು. ಬಿಜೆಪಿ 10, ಎಎಪಿಯಿಂದ ಒಬ್ಬ ಅಭ್ಯರ್ಥಿ ಗೆದ್ದಿದ್ದರು. ಜನವರಿ 6ರಂದು 8 ಜನ ಪಕ್ಷೇತರರು, ಎಎಪಿ ಸದಸ್ಯ ಬಿಜೆಪಿ ಸೇರಿದ್ದರು. ಅದರ ಬೆನ್ನಲ್ಲೇ ಇನ್ನೊಬ್ಬ ಪಕ್ಷೇತರ ಸದಸ್ಯ ಭಾನುವಾರ ಬಿಜೆಪಿ ಸೇರಿದ್ದಾರೆ. ಇದರೊಂದಿಗೆ ಬಿಜೆಪಿಯ ಒಟ್ಟು ಸಂಖ್ಯಾಬಲ 20ಕ್ಕೆ ಏರಿಕೆಯಾಗಿದೆ. ಬಿಜೆಪಿ ಅಧಿಕಾರದ ಗದ್ದುಗೆಯೇರಲು ಮಾರ್ಗ ಪ್ರಶಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>