<p>ಹೊಸಪೇಟೆ (ವಿಜಯನಗರ): ನಗರದ ಹರಿಹರ ರಸ್ತೆಯ ಗುರು ಕಾಲೇಜ್ ಬಳಿ ಗುರುವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಸರ್ಕಾರಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.</p>.<p>ಕೆಎಸ್ಆರ್ಟಿಸಿ ಬಸ್ ದಾವಣಗೆರೆಯಿಂದ ನಗರದತ್ತ ಬರುತ್ತಿತ್ತು. ಆಗ ವ್ಯಕ್ತಿ ಏಕಾಏಕಿ ರಸ್ತೆ ದಾಟಲು ಯತ್ನಿಸಿದಾಗ ಬಸ್ ಆತನಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸ್ ಚಾಲಕ ಗದಗ ಜಿಲ್ಲೆ ರೋಣ ತಾಲ್ಲೂಕಿನ ಶರಣಪ್ಪ ವಿರುದ್ಧ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿ ಸುಮಾರು 40 ವರ್ಷದವನಿದ್ದು, ಆತನ ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-1637628280</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ನಗರದ ಹರಿಹರ ರಸ್ತೆಯ ಗುರು ಕಾಲೇಜ್ ಬಳಿ ಗುರುವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಸರ್ಕಾರಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.</p>.<p>ಕೆಎಸ್ಆರ್ಟಿಸಿ ಬಸ್ ದಾವಣಗೆರೆಯಿಂದ ನಗರದತ್ತ ಬರುತ್ತಿತ್ತು. ಆಗ ವ್ಯಕ್ತಿ ಏಕಾಏಕಿ ರಸ್ತೆ ದಾಟಲು ಯತ್ನಿಸಿದಾಗ ಬಸ್ ಆತನಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸ್ ಚಾಲಕ ಗದಗ ಜಿಲ್ಲೆ ರೋಣ ತಾಲ್ಲೂಕಿನ ಶರಣಪ್ಪ ವಿರುದ್ಧ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿ ಸುಮಾರು 40 ವರ್ಷದವನಿದ್ದು, ಆತನ ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-1637628280</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>