<p>ಹೊಸಪೇಟೆ (ವಿಜಯನಗರ): ಯೂರಿಯಾ ಗೊಬ್ಬರ ಅಭಾವ ನಿವಾರಿಸಬೇಕು, ಅದರ ಬೆಲೆ ಇಳಿಸಬೇಕು ಹಾಗೂ ಎಫ್ಐಡಿ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ವತಿಯಿಂದ ರಾಜ್ಯ ಸರ್ಕಾರಕ್ಕೆ ಈಚೆಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ತೆರಳಿ ಉಪನಿರ್ದೇಶಕ ನಯೀಂ ಪಾಷಾ ಅವರ ಮೂಲಕ ಕೃಷಿ ಸಚಿವರಿಗೆ ಮನವಿ ಕಳುಹಿಸಿಕೊಟ್ಟರು.</p>.<p>ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಬಹಳ ಕಷ್ಟದಲ್ಲಿದ್ದಾರೆ. ದಲ್ಲಾಳಿಗಳ ಹಾವಳಿಯಿಂದಲೂ ಕಂಗೆಟ್ಟಿದ್ದಾರೆ. ರೈರರಿಗೆ ಸಮರ್ಪಕವಾಗಿ ಯೂರಿಯಾ ಒದಗಿಸಬೇಕು, ಎಫ್ಐಡಿ ರದ್ದುಪಡಿಸಬೇಕು, ಸರ್ಕಾರಿ ಭೂಮಿ, ಹಳ್ಳ ಪರಂಪೋಕು ಮತ್ತು ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರು ಸುಮಾರು 60-70 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ, ಎಫ್ಐಡಿ ಕಡ್ಡಾಯ ಮಾಡಿರುವುದರಿಂದ ಅವರಿಗೆ ಯೂರಿಯಾ ಸಿಗದಂತಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ್ ಹೇಳಿದರು.</p>.<p>ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ನೀಡುವ ₹6 ಸಾವಿರ ಜತೆಗೆ ರಾಜ್ಯ ಸರ್ಕಾರ ₹4 ಸಾವಿರ ನೀಡಬೇಕು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದ ನಂತರ ಅದು ರದ್ದಾಗಿದೆ. ಹೊಸಪೇಟೆ ತಾಲ್ಲೂಕಿನಲ್ಲಿ ಮಣ್ಣು ಪರೀಕ್ಷೆ ಕೇಂದ್ರವನ್ನು ಕೂಡಲೇ ಆರಂಭಿಸಬೇಕು ಮತ್ತು ಭತ್ತ ಖರೀದಿ ಕೇಂದ್ರವನ್ನು ಕೂಡಲೇ ತೆರೆಯಬೇಕು ಎಂದು ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮನೋಹರ್ ಗೌಡ, ರೈತ ಸಂಘದ ಮುಖಂಡರಾದ ದೊಡ್ಡಗಾಳೇಪ್ಪ, ಸುರೇಶ್, ಭುವನಹಳ್ಳಿ ಬಸವರಾಜ್, ಜಾಕೀರ್ ಹುಸೇನ್, ಗಂಟೆ ಮಂಜುನಾಥ ಸಿಂಗ್ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-1337636403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಯೂರಿಯಾ ಗೊಬ್ಬರ ಅಭಾವ ನಿವಾರಿಸಬೇಕು, ಅದರ ಬೆಲೆ ಇಳಿಸಬೇಕು ಹಾಗೂ ಎಫ್ಐಡಿ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ವತಿಯಿಂದ ರಾಜ್ಯ ಸರ್ಕಾರಕ್ಕೆ ಈಚೆಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ತೆರಳಿ ಉಪನಿರ್ದೇಶಕ ನಯೀಂ ಪಾಷಾ ಅವರ ಮೂಲಕ ಕೃಷಿ ಸಚಿವರಿಗೆ ಮನವಿ ಕಳುಹಿಸಿಕೊಟ್ಟರು.</p>.<p>ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಬಹಳ ಕಷ್ಟದಲ್ಲಿದ್ದಾರೆ. ದಲ್ಲಾಳಿಗಳ ಹಾವಳಿಯಿಂದಲೂ ಕಂಗೆಟ್ಟಿದ್ದಾರೆ. ರೈರರಿಗೆ ಸಮರ್ಪಕವಾಗಿ ಯೂರಿಯಾ ಒದಗಿಸಬೇಕು, ಎಫ್ಐಡಿ ರದ್ದುಪಡಿಸಬೇಕು, ಸರ್ಕಾರಿ ಭೂಮಿ, ಹಳ್ಳ ಪರಂಪೋಕು ಮತ್ತು ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರು ಸುಮಾರು 60-70 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ, ಎಫ್ಐಡಿ ಕಡ್ಡಾಯ ಮಾಡಿರುವುದರಿಂದ ಅವರಿಗೆ ಯೂರಿಯಾ ಸಿಗದಂತಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ್ ಹೇಳಿದರು.</p>.<p>ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ನೀಡುವ ₹6 ಸಾವಿರ ಜತೆಗೆ ರಾಜ್ಯ ಸರ್ಕಾರ ₹4 ಸಾವಿರ ನೀಡಬೇಕು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದ ನಂತರ ಅದು ರದ್ದಾಗಿದೆ. ಹೊಸಪೇಟೆ ತಾಲ್ಲೂಕಿನಲ್ಲಿ ಮಣ್ಣು ಪರೀಕ್ಷೆ ಕೇಂದ್ರವನ್ನು ಕೂಡಲೇ ಆರಂಭಿಸಬೇಕು ಮತ್ತು ಭತ್ತ ಖರೀದಿ ಕೇಂದ್ರವನ್ನು ಕೂಡಲೇ ತೆರೆಯಬೇಕು ಎಂದು ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮನೋಹರ್ ಗೌಡ, ರೈತ ಸಂಘದ ಮುಖಂಡರಾದ ದೊಡ್ಡಗಾಳೇಪ್ಪ, ಸುರೇಶ್, ಭುವನಹಳ್ಳಿ ಬಸವರಾಜ್, ಜಾಕೀರ್ ಹುಸೇನ್, ಗಂಟೆ ಮಂಜುನಾಥ ಸಿಂಗ್ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-1337636403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>