<p><strong>ಹೊಸಪೇಟೆ (ವಿಜಯನಗರ)</strong>: ತುಂಗಭದ್ರಾ ಅಣೆಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ನೀಡಲಾಗುವುದು ಎಂದು ಸಂಸದ ಇ.ತುಕಾರಾಂ ಹೇಳಿದರು.</p><p>ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ನಾಲ್ವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿರುವೆ, ಸಂಡೂರಿನ ಮೂವರು, ಕೂಡ್ಲಿಗಿಯ ಮೂವರು ಮೃಪತಟ್ಟಿದ್ದಾರೆ ಎಂಬುದನ್ನು ಅವರ ಗಮನಕ್ಕೆ ತಂದೆ. ತಕ್ಷಣ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದರು ಎಂದರು.</p><p>‘ಗಾಯಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸಲಿದ್ದೇನೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಗರಿಷ್ಠ ₹1 ಲಕ್ಷದವರೆಗೆ ವೆಚ್ಚ ಭರಿಸುವುದಕ್ಕೆ ಅವಕಾಶ ಇದೆ. ಅದೆಲ್ಲವನ್ನೂ ನಾನು ಒದಗಿಸಿಕೊಡಲಿದ್ದೇನೆ’ ಎಂದು ಸಂಸದರು ಹೇಳಿದರು.</p>.ಟ್ರಾಕ್ಟರ್–ಟ್ಯಾಂಕರ್ ಅಪಘಾತ: ಜಾತ್ರೆಗೆ ಹೋಗುತ್ತಿದ್ದ ಏಳು ಜನ ದುರ್ಮರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ತುಂಗಭದ್ರಾ ಅಣೆಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ನೀಡಲಾಗುವುದು ಎಂದು ಸಂಸದ ಇ.ತುಕಾರಾಂ ಹೇಳಿದರು.</p><p>ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ನಾಲ್ವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿರುವೆ, ಸಂಡೂರಿನ ಮೂವರು, ಕೂಡ್ಲಿಗಿಯ ಮೂವರು ಮೃಪತಟ್ಟಿದ್ದಾರೆ ಎಂಬುದನ್ನು ಅವರ ಗಮನಕ್ಕೆ ತಂದೆ. ತಕ್ಷಣ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದರು ಎಂದರು.</p><p>‘ಗಾಯಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸಲಿದ್ದೇನೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಗರಿಷ್ಠ ₹1 ಲಕ್ಷದವರೆಗೆ ವೆಚ್ಚ ಭರಿಸುವುದಕ್ಕೆ ಅವಕಾಶ ಇದೆ. ಅದೆಲ್ಲವನ್ನೂ ನಾನು ಒದಗಿಸಿಕೊಡಲಿದ್ದೇನೆ’ ಎಂದು ಸಂಸದರು ಹೇಳಿದರು.</p>.ಟ್ರಾಕ್ಟರ್–ಟ್ಯಾಂಕರ್ ಅಪಘಾತ: ಜಾತ್ರೆಗೆ ಹೋಗುತ್ತಿದ್ದ ಏಳು ಜನ ದುರ್ಮರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>