<p><strong>ಹೊಸಪೇಟೆ (ವಿಜಯನಗರ):</strong> ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಸ್ತಿತ್ತಕ್ಕೆ ಬರುತ್ತಿರುವ ನೂತನ ಸಚಿವ ಸಂಪುಟದಲ್ಲಿ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ನಗರದ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಇಲ್ಲಿನ ತಾಲ್ಲೂಕು ಕಚೇರಿ ಸಮೀಪ ಸೋಮವಾರ ಜಮೀರ್ ಅವರ ಭಾವಚಿತ್ರ ಹಿಡಿದು, ಡಿಸಿಎಂ ಸ್ಥಾನ ನೀಡಬೇಕು ಎಂದು ಘೋಷಣೆ ಕೂಗಿದರು.</p>.<p>ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕೊತ್ವಾಲ ಮೊಹಮ್ಮದ್ ಮೋಸಿನ್, ‘ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಸಂಖ್ಯೆ 80 ಲಕ್ಷಕ್ಕೂ ಅಧಿಕ ಇದೆ. ಡಿಸಿಎಂ ಸ್ಥಾನ ಮುಸ್ಲಿಂ ಸಮುದಾಯದವರಿಗೆ ಸಿಗಬೇಕಾಗಿದೆ. ಈ ಮೊದಲು ನೀಡಲಾದ ಸಚಿವ ಸ್ಥಾನಗಳನ್ನು ದಕ್ಷತೆಯಿಂದ ನಿಭಾಯಿಸಿದ ಹಾಗೂ ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಜಮೀರ್ ಅವರಿಗೆ ಈ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಮುದಾಯದ ಮುಖಂಡರಾದ ಫಿರೋಜ್ ಖಾನ್, ಬಿ. ಅನ್ಸರ್ ಬಾಷಾ, ಎಂ.ಎಂ.ಗೌಸ್, ಅಬೂಬಕರ್, ಎನ್.ಎಸ್. ರಫೀಕ್, ಅತೀಕ್ ರಷೀದ್, ರಜಾಕ್, ಎಂ.ಡಿ. ಜಾವೀದ್ ಸಾದೀಕ್ ಅಲಿ, ನೌಷಾದ್, ಅಬ್ದುಲ್ ಗಫೂರ್, ಕರಂಗಿ ನಜೀರ್, ಯೂನಿಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-742628345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಸ್ತಿತ್ತಕ್ಕೆ ಬರುತ್ತಿರುವ ನೂತನ ಸಚಿವ ಸಂಪುಟದಲ್ಲಿ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ನಗರದ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಇಲ್ಲಿನ ತಾಲ್ಲೂಕು ಕಚೇರಿ ಸಮೀಪ ಸೋಮವಾರ ಜಮೀರ್ ಅವರ ಭಾವಚಿತ್ರ ಹಿಡಿದು, ಡಿಸಿಎಂ ಸ್ಥಾನ ನೀಡಬೇಕು ಎಂದು ಘೋಷಣೆ ಕೂಗಿದರು.</p>.<p>ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕೊತ್ವಾಲ ಮೊಹಮ್ಮದ್ ಮೋಸಿನ್, ‘ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಸಂಖ್ಯೆ 80 ಲಕ್ಷಕ್ಕೂ ಅಧಿಕ ಇದೆ. ಡಿಸಿಎಂ ಸ್ಥಾನ ಮುಸ್ಲಿಂ ಸಮುದಾಯದವರಿಗೆ ಸಿಗಬೇಕಾಗಿದೆ. ಈ ಮೊದಲು ನೀಡಲಾದ ಸಚಿವ ಸ್ಥಾನಗಳನ್ನು ದಕ್ಷತೆಯಿಂದ ನಿಭಾಯಿಸಿದ ಹಾಗೂ ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಜಮೀರ್ ಅವರಿಗೆ ಈ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಮುದಾಯದ ಮುಖಂಡರಾದ ಫಿರೋಜ್ ಖಾನ್, ಬಿ. ಅನ್ಸರ್ ಬಾಷಾ, ಎಂ.ಎಂ.ಗೌಸ್, ಅಬೂಬಕರ್, ಎನ್.ಎಸ್. ರಫೀಕ್, ಅತೀಕ್ ರಷೀದ್, ರಜಾಕ್, ಎಂ.ಡಿ. ಜಾವೀದ್ ಸಾದೀಕ್ ಅಲಿ, ನೌಷಾದ್, ಅಬ್ದುಲ್ ಗಫೂರ್, ಕರಂಗಿ ನಜೀರ್, ಯೂನಿಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-742628345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>