<p><strong>ಹೊಸಪೇಟೆ:</strong> ಪಡಿತರ ತಿದ್ದುಪಡಿ ಸೇವೆಗಳ ಅವಧಿಯನ್ನು ಮೇ 8ರಿಂದ 2027ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದ್ದು, ಹತ್ತಿರದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಸೌಲಭ್ಯ ಪಡೆಯಬಹುದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.</p>.<p>ಸೇವಾ ಶುಲ್ಕಗಳ ವಿವರ: ಪಡಿತರ ಚೀಟಿ ತಿದ್ದುಪಡಿ ಹೆಸರು ಸೇರ್ಪಡೆ, ತೆಗೆದು ಹಾಕುವುದು, ವಿಳಾಸ ಅಥವಾ ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಇ-ಕೆವೈಸಿ ಪ್ರಕ್ರಿಯೆಗಳಿಗೆ ₹25 ನಿಗದಿಪಡಿಸಲಾಗಿದೆ. ಹೊಸ ಪಡಿತರ ಚೀಟಿ ಅರ್ಜಿ ಶುಲ್ಕ ₹ 50 ಹಾಗೂ ಆದ್ಯತೇತರ ಕುಟುಂಬಗಳ ಸ್ವ-ಇಚ್ಛೆ ನೋಂದಣಿ ಶುಲ್ಕ ₹20 ನಿಗದಿಪಡಿಸಲಾಗಿದೆ. (ಈ ಸೇವೆಗಳು ಪ್ರಸ್ತುತ ಸ್ಥಗಿತಗೊಳಿಸಲಾಗಿದೆ).</p>.<p>ಸಾರ್ವಜನಿಕರು ಮಧ್ಯವರ್ತಿ ಅಥವಾ ಮೂರನೇ ವ್ಯಕ್ತಿಗಳ ಸಂಪರ್ಕಿಸಿ ಆಮಿಷಕ್ಕೆ ಒಳಗಾಗಬಾರದು, ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ಯಾರಿಗೂ ನೀಡಬಾರದು. ಮಾಹಿತಿಗೆ ಆಯಾ ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-25-1541090652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಪಡಿತರ ತಿದ್ದುಪಡಿ ಸೇವೆಗಳ ಅವಧಿಯನ್ನು ಮೇ 8ರಿಂದ 2027ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದ್ದು, ಹತ್ತಿರದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಸೌಲಭ್ಯ ಪಡೆಯಬಹುದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.</p>.<p>ಸೇವಾ ಶುಲ್ಕಗಳ ವಿವರ: ಪಡಿತರ ಚೀಟಿ ತಿದ್ದುಪಡಿ ಹೆಸರು ಸೇರ್ಪಡೆ, ತೆಗೆದು ಹಾಕುವುದು, ವಿಳಾಸ ಅಥವಾ ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಇ-ಕೆವೈಸಿ ಪ್ರಕ್ರಿಯೆಗಳಿಗೆ ₹25 ನಿಗದಿಪಡಿಸಲಾಗಿದೆ. ಹೊಸ ಪಡಿತರ ಚೀಟಿ ಅರ್ಜಿ ಶುಲ್ಕ ₹ 50 ಹಾಗೂ ಆದ್ಯತೇತರ ಕುಟುಂಬಗಳ ಸ್ವ-ಇಚ್ಛೆ ನೋಂದಣಿ ಶುಲ್ಕ ₹20 ನಿಗದಿಪಡಿಸಲಾಗಿದೆ. (ಈ ಸೇವೆಗಳು ಪ್ರಸ್ತುತ ಸ್ಥಗಿತಗೊಳಿಸಲಾಗಿದೆ).</p>.<p>ಸಾರ್ವಜನಿಕರು ಮಧ್ಯವರ್ತಿ ಅಥವಾ ಮೂರನೇ ವ್ಯಕ್ತಿಗಳ ಸಂಪರ್ಕಿಸಿ ಆಮಿಷಕ್ಕೆ ಒಳಗಾಗಬಾರದು, ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ಯಾರಿಗೂ ನೀಡಬಾರದು. ಮಾಹಿತಿಗೆ ಆಯಾ ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-25-1541090652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>