ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಮಂಗಳವಾರ ನಸುಕಿನ ಜಾವ ಐದು ಗಂಟೆಯಿಂದ ಹತ್ತು ಗಂಟೆಯವರೆಗೆ ಬಿರುಸಿನ ಮಳೆಯಾಗಿದೆ. ಈಗ ರಭಸದ ಮಳೆನಿಂತಿದ್ದು, ತುಂತುರು ಮಳೆಯಾಗುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಬೆಳಗಿನ ವೇಳೆ ಜೋರು ಮಳೆ ಬಿದ್ದದ್ದರಿಂದ ಹಾಲು, ದಿನಪತ್ರಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ದೈನಂದಿನ ಕೆಲಸಕ್ಕೆಹೋಗುವವರು ಮಳೆಯಲ್ಲೇ ಕೊಡೆ ಹಿಡಿದುಕೊಂಡು ಹೆಜ್ಜೆ ಹಾಕಿದರು. ಬಿರುಸಿನ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.