<p><strong>ಹೊಸಪೇಟೆ</strong> (ವಿಜಯನಗರ): ಮಾಜಿ ದೇವದಾಸಿಯರ ಸ್ಥಿತಿಗತಿ ತಿಳಿಯಲು ಸರ್ಕಾರ ನಡೆಸಿದ ಸಮೀಕ್ಷೆ ಅಪೂರ್ಣವಾಗಿದ್ದು, ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ, ಆದರೆ ಈ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ತಾಲ್ಲೂಕಿನ ವಿವಿಧ ಸಂಘಟನೆಗಳು ಒಕ್ಕೊರಲಿನಿಂದ ತಿಳಿಸಿವೆ. ಜಿಲ್ಲಾಧಿಕಾರಿ ಅವರ ಸಮ್ಮುಖದಲ್ಲೇ ಅಹವಾಲು ಮಂಡಿಸಲು ಅವುಗಳು ನಿರ್ಧರಿಸಿವೆ.</p>.<p>‘ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಇದೀಗ ತಾಲ್ಲೂಕು ಸಮಿತಿ ಸಭೆ ಕರೆದಿದ್ದಾರೆ. ಸಭೆಗೆ ನಮಗೆ ಆಹ್ವಾನವೇ ಇರಲಿಲ್ಲ. ಕೊನೆಗೆ ಒತ್ತಾಯಕ್ಕೆ ನಮ್ಮನ್ನು ಕರೆಸಿಕೊಂಡಿದ್ದಾರೆ. ಸಮೀಕ್ಷೆಯಲ್ಲಿ ಅದೆಷ್ಟೋ ಮನೆಗಳಿಗೆ ಭೇಟಿ ನೀಡಿಲ್ಲ, ಮಾಹಿತಿ ಕೊಟ್ಟರೂ ಸೇರಿಸಿಲ್ಲ. ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಾಜಿ ದೇವದಾಸಿಯರ ಕುಟುಂಬಗಳಿದ್ದರೂ ಸದ್ಯ ತೋರಿಸಿರುವುದು 3 ಸಾವಿರದಷ್ಟು ಮಾತ್ರ. ಉಳಿದವರು ಎಲ್ಲಿಗೆ ಹೋದರು, ಏನಾದರು ಎಂದು ಕೇಳಿದ್ದೇವೆ’ ಎಂದು ದೇವದಾಸಿಯರ ಜೀವನ ಮಟ್ಟ ಸುಧಾರಿಸಲು 24 ವರ್ಷಗಳಿಂದ ಕೆಲಸ ಮಾಡುತ್ತಿರುವ ಸಖಿ ಟ್ರಸ್ಟ್ನ ಸಂಸ್ಥಾಪಕ ನಿರ್ದೇಶಕಿ ಎಂ.ಭಾಗ್ಯಲಕ್ಷ್ಮಿ ತಿಳಿಸಿದರು.</p>.<p>‘ಡಿಸೆಂಬರ್ 31ಕ್ಕೆ ಕೊನೆಗೊಂಡ ಸಮೀಕ್ಷೆ ಅವಧಿಯಲ್ಲಿ ಕೇವಲ ಎರಡು ಸಭೆಗಳಷ್ಟೇ ನಡೆದಿದ್ದವು. ಅದು ಸಹ ನಾಮಕಾವಸ್ಥೆಗೆ ಮಾತ್ರ ನಡೆದಿದೆ. ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆಗೊಳ್ಳುವ ಹಂತದಲ್ಲಿದೆ ಎಂದು ಬಿಂಬಿಸುವುದಷ್ಟೇ ಅಧಿಕಾರಿಗಳ ಗುರಿಯಾಗಿತ್ತು. ಹೀಗಾಗಿ ಸರಿಯಾದ ವರದಿಯನ್ನೇ ಸಿದ್ಧಪಡಿಸಿಲ್ಲ’ ಎಂದು ಅವರು ಹೇಳಿದರು.</p>.<p>‘ಇದು ಮಧ್ಯಂತರ ವರದಿ, ಪೂರ್ಣ ವರದಿ ಸಲ್ಲಿಕೆ ಆಮೇಲೆ ಎಂದು ಅಧಿಕಾರಿಗಳು ಈಗ ಹೇಳುತ್ತಿದ್ದಾರೆ. ಇನ್ನು ಮುಂದೆ ಜಂಟಿ ಸಮೀಕ್ಷೆ ಆದರಷ್ಟೇ ಮಜಿ ದೇವದಾಸಿಯರು ಮತ್ತು ಅವರ ಎರಡು ತಲೆಮಾರುಗಳ ಜನರಿಗೆ ನ್ಯಾಯ ಸಿಗಲು ಸಾಧ್ಯ’ ಎಂದು ಅವರು ತಿಳಿಸಿದರು.</p>.<p>ಸಖಿ ಟ್ರಸ್ಟ್ ಮತ್ತು ಇತರ ಕೆಲವು ಸಂಘಟನೆಗಳ ಅಹವಾಲು ಆಲಿಸಿದ ಬಳಿಕ, ಜಿಲ್ಲಾಧಿಕಾರಿಗಳಿಂದಲೇ ಈ ಸಮಸ್ಯೆಗೆ ಪರಿಹಾರ ಸಿಗಬಹುದಷ್ಟೇ, ಡಿ.ಸಿ ಅವರ ಮುಂದೆಯೇ ವಿಚಾರ ಪ್ರಸ್ತಾಪಿಸಿ ಎಂದು ತಿಳಿಸಲಾಯಿತು ಎಂದು ತಹಶೀಲ್ದಾರ್ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong> (ವಿಜಯನಗರ): ಮಾಜಿ ದೇವದಾಸಿಯರ ಸ್ಥಿತಿಗತಿ ತಿಳಿಯಲು ಸರ್ಕಾರ ನಡೆಸಿದ ಸಮೀಕ್ಷೆ ಅಪೂರ್ಣವಾಗಿದ್ದು, ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ, ಆದರೆ ಈ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ತಾಲ್ಲೂಕಿನ ವಿವಿಧ ಸಂಘಟನೆಗಳು ಒಕ್ಕೊರಲಿನಿಂದ ತಿಳಿಸಿವೆ. ಜಿಲ್ಲಾಧಿಕಾರಿ ಅವರ ಸಮ್ಮುಖದಲ್ಲೇ ಅಹವಾಲು ಮಂಡಿಸಲು ಅವುಗಳು ನಿರ್ಧರಿಸಿವೆ.</p>.<p>‘ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಇದೀಗ ತಾಲ್ಲೂಕು ಸಮಿತಿ ಸಭೆ ಕರೆದಿದ್ದಾರೆ. ಸಭೆಗೆ ನಮಗೆ ಆಹ್ವಾನವೇ ಇರಲಿಲ್ಲ. ಕೊನೆಗೆ ಒತ್ತಾಯಕ್ಕೆ ನಮ್ಮನ್ನು ಕರೆಸಿಕೊಂಡಿದ್ದಾರೆ. ಸಮೀಕ್ಷೆಯಲ್ಲಿ ಅದೆಷ್ಟೋ ಮನೆಗಳಿಗೆ ಭೇಟಿ ನೀಡಿಲ್ಲ, ಮಾಹಿತಿ ಕೊಟ್ಟರೂ ಸೇರಿಸಿಲ್ಲ. ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಾಜಿ ದೇವದಾಸಿಯರ ಕುಟುಂಬಗಳಿದ್ದರೂ ಸದ್ಯ ತೋರಿಸಿರುವುದು 3 ಸಾವಿರದಷ್ಟು ಮಾತ್ರ. ಉಳಿದವರು ಎಲ್ಲಿಗೆ ಹೋದರು, ಏನಾದರು ಎಂದು ಕೇಳಿದ್ದೇವೆ’ ಎಂದು ದೇವದಾಸಿಯರ ಜೀವನ ಮಟ್ಟ ಸುಧಾರಿಸಲು 24 ವರ್ಷಗಳಿಂದ ಕೆಲಸ ಮಾಡುತ್ತಿರುವ ಸಖಿ ಟ್ರಸ್ಟ್ನ ಸಂಸ್ಥಾಪಕ ನಿರ್ದೇಶಕಿ ಎಂ.ಭಾಗ್ಯಲಕ್ಷ್ಮಿ ತಿಳಿಸಿದರು.</p>.<p>‘ಡಿಸೆಂಬರ್ 31ಕ್ಕೆ ಕೊನೆಗೊಂಡ ಸಮೀಕ್ಷೆ ಅವಧಿಯಲ್ಲಿ ಕೇವಲ ಎರಡು ಸಭೆಗಳಷ್ಟೇ ನಡೆದಿದ್ದವು. ಅದು ಸಹ ನಾಮಕಾವಸ್ಥೆಗೆ ಮಾತ್ರ ನಡೆದಿದೆ. ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆಗೊಳ್ಳುವ ಹಂತದಲ್ಲಿದೆ ಎಂದು ಬಿಂಬಿಸುವುದಷ್ಟೇ ಅಧಿಕಾರಿಗಳ ಗುರಿಯಾಗಿತ್ತು. ಹೀಗಾಗಿ ಸರಿಯಾದ ವರದಿಯನ್ನೇ ಸಿದ್ಧಪಡಿಸಿಲ್ಲ’ ಎಂದು ಅವರು ಹೇಳಿದರು.</p>.<p>‘ಇದು ಮಧ್ಯಂತರ ವರದಿ, ಪೂರ್ಣ ವರದಿ ಸಲ್ಲಿಕೆ ಆಮೇಲೆ ಎಂದು ಅಧಿಕಾರಿಗಳು ಈಗ ಹೇಳುತ್ತಿದ್ದಾರೆ. ಇನ್ನು ಮುಂದೆ ಜಂಟಿ ಸಮೀಕ್ಷೆ ಆದರಷ್ಟೇ ಮಜಿ ದೇವದಾಸಿಯರು ಮತ್ತು ಅವರ ಎರಡು ತಲೆಮಾರುಗಳ ಜನರಿಗೆ ನ್ಯಾಯ ಸಿಗಲು ಸಾಧ್ಯ’ ಎಂದು ಅವರು ತಿಳಿಸಿದರು.</p>.<p>ಸಖಿ ಟ್ರಸ್ಟ್ ಮತ್ತು ಇತರ ಕೆಲವು ಸಂಘಟನೆಗಳ ಅಹವಾಲು ಆಲಿಸಿದ ಬಳಿಕ, ಜಿಲ್ಲಾಧಿಕಾರಿಗಳಿಂದಲೇ ಈ ಸಮಸ್ಯೆಗೆ ಪರಿಹಾರ ಸಿಗಬಹುದಷ್ಟೇ, ಡಿ.ಸಿ ಅವರ ಮುಂದೆಯೇ ವಿಚಾರ ಪ್ರಸ್ತಾಪಿಸಿ ಎಂದು ತಿಳಿಸಲಾಯಿತು ಎಂದು ತಹಶೀಲ್ದಾರ್ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>