ಒಂದು ಕಾಲು ವರ್ಷದ ಹಿಂದೆ ಮನ್ಸೂರ್ ಅಲಿ ಪೌರಾಯುಕ್ತರಾಗಿ ನೇಮಕಗೊಂಡಿದ್ದರು. ಸರ್ಕಾರ ಅವರನ್ನು ವರ್ಗಾವಣೆಗೊಳಿಸಿದರೂ ಹೊಸ ಸ್ಥಳ ತೋರಿಸಿಲ್ಲ. ಅಲಿ ಅವರ ಜಾಗಕ್ಕೆ ಬಳ್ಳಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎಸ್. ರಮೇಶ ಅವರನ್ನು ಪೌರಾಯುಕ್ತರಾಗಿ ನೇಮಕಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್. ಪ್ರಸಾದ್ ಆದೇಶ ಹೊರಡಿಸಿದ್ದಾರೆ.